ಸಿದ್ದು ಸ್ವಾಭಿಮಾನಿ ಸಮಾವೇಶ ಕಬ್ಜಾ ಮಾಡಿ, ಡಿಕೆಶಿ ಹಿಡಿತದಲ್ಲಿ ಜನಕಲ್ಯಾಣ ಕಾರ್ಯಕ್ರಮ!

ಸಿದ್ದು ಸ್ವಾಭಿಮಾನಿ ಸಮಾವೇಶ ಕಬ್ಜಾ ಮಾಡಿ, ಡಿಕೆಶಿ ಹಿಡಿತದಲ್ಲಿ ಜನಕಲ್ಯಾಣ ಕಾರ್ಯಕ್ರಮ!

Published : Dec 03, 2024, 03:39 PM IST

ಹಾಸನದಲ್ಲಿ ನಡೆಯಲಿರುವ ಸಮಾವೇಶವು ಸ್ವಾಭಿಮಾನಿ ಸಮಾವೇಶವಲ್ಲ, ಬದಲಿಗೆ ಜನಕಲ್ಯಾಣ ಸಮಾವೇಶವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿದೆ. ಈ ಮೂಲಕ ಸಮಾವೇಶವನ್ನು ಪಕ್ಷದ ಹಿಡಿತಕ್ಕೆ ತಂದ ಡಿಕೆಶಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹಾಸನದಲ್ಲಿ ನಡೆಯೋದು ಸ್ವಾಭಿಮಾನಿ ಸಮಾವೇಶ ಅಲ್ಲ, ಜನಕಲ್ಯಾಣ ಸಮಾವೇಶ. ಇದು ಪಕ್ಷಕ್ಕೆ ಸೇರಿದ ಸಮಾವೇಶ ಆಗಿರುವುದರಿಂದ ನನ್ನ ಅಧ್ಯಕ್ಷತೆಯಲ್ಲೇ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಿಎಂ ಸ್ವಾಭಿಮಾನಿ ಸಮಾವೇಶವನ್ನು ಕೆಪಿಸಿಸಿ ಅದ್ಯಕ್ಷ ಡಿಕೆಶಿ ಅವರು ಪಕ್ಷದ  ಹಿಡಿತಕ್ಕೆ ತಂದು ಇದಕ್ಕೆ ಜನಕಲ್ಯಾಣ ಸಮಾವೇಶ ಎಂದು ಹೆಸರಿಟ್ಟಿದ್ದಾರೆ. ಇದೀಗ ಸಮಾವೇಶ ನಡೆಯೋ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.  

ಕೆಪಿಸಿಸಿ ಮುಖಂಡತ್ವದಲ್ಲಿ, ನನ್ನ ಮುಖಂಡತ್ವದಲ್ಲೇ ಸಮಾವೇಶ ನಡೆಯುತ್ತದೆ. ಸ್ವಾಭಿಮಾನಿ ಒಕ್ಕೂಟಗಳು ನಮ್ಮ ಕಾರ್ಯಕ್ರಮ ಮೆಚ್ಚಿ ಸಪೋರ್ಟ್ ಮಾಡುತ್ತಿದ್ದಾರೆ. ಅವರು ನಮಗೆ ಬೆಂಬಲ ಕೊಡ್ತಿರೋದು ಸಂತೋಷಕರ. ಪ್ರಾರಂಭದಿಂದಲೂ ದಿನಕ್ಕೊಂದು ಆಯಾಮ ಪಡೆದುಕೊಂಡ ಸಮಾವೇಶ, ಈಗ ಕೆಪಿಸಿಸಿ  ಆಶ್ರಯದಲ್ಲಿ ಜನ ಕಲ್ಯಾಣ ಸಮಾವೇಶ ಎಂದು ನಾಮಕರಣ ಮಾಡಲಾಗಿದೆ. ನಾನೆ ಕಾರ್ಯಕ್ರಮದ ಅಧ್ಯಕ್ಷ, ಉಸ್ತುವಾರಿ. ಮೊದಲು ಸಿದ್ದರಾಮಯ್ಯ ಬೆಂಬಲಿಗರಿಂದ ಶಕ್ತಿ ಪ್ರದರ್ಶನಕ್ಕೆ ಸಜ್ಜುಗೊಂಡಿದ್ದ ವೇದಿಕೆಗೆ ಬ್ರೇಕ್ ಹಾಕಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಸಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ಇಡೀ ಕಾರ್ಯಕ್ರಮವನ್ನೇ ಕಬ್ಜಾ ಮಾಡಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more