Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Published : Jan 01, 2022, 03:46 PM ISTUpdated : Jan 01, 2022, 03:55 PM IST

ಕೆಪಿಸಿಸಿ (KPCC) ಕಾರ್ಯಾದ್ಯಕ್ಷ ಸಲೀಂ ಅಹ್ಮದ್ (Salim Ahmad)  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಮೇಕೆದಾಟುವಿನಿಂದ (Mekwdatu) ಬೆಂಗಳೂರುವರೆಗೆ (Bengaluru) ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 
 

ಹಾವೇರಿ (ಜ. 01): ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.  ' ಸ್ಥಳೀಯ  ಸಂಸ್ಥೆಗಳ ಚುನಾವಣೆಗಳಲ್ಲಿ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಆಡಳಿತದಿಂದ ಜನ ಭ್ರಮ ನಿರಸ ಆಗಿದ್ದಾರೆ. ತಾ.ಪಂ ಜಿ.ಪಂ  ಚುನಾವಣೆಯಲ್ಲೂ ಕೂಡಾ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಮುಂದಿನ ವಿಧಾನಸಭಾ  ಚುನಾವಣೆಯಲ್ಲಿ ಜನ  ಕಾಂಗ್ರೆಸ್ 150 ಸೀಟ್ ಗೆಲ್ಲಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಭ್ರಷ್ಟಾಚಾರ ತಡೆಯಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಮಂತ್ರಿಗಳು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಕಾಂಟ್ರಾಕ್ಟರ್  ಗಳು ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿಗಳ ಕಾರ್ಯಾಲಯದಿಂದ ಯಾವುದೇ ಉತ್ತರ ನೀಡಿಲ್ಲ. ನ ಖಾವೂಂವಾ , ನ ಖಾನೆ ದೂಂಗಾ ಅನ್ನೋ ಪ್ರೈಮ್ ಮಿನಿಸ್ಟರ್ ಇದನ್ನ ತನಿಖೆಯನ್ನೇ ನಡೆಸಿಲ್ಲ. ಸಚಿವ ಭೈರತಿ ಬಸವರಾಜ ಮೇಲೆ ಭೂ ಹಗರಣದ ಆರೋಪ ಕೂಡಾ ಬಂದಿದೆ.  ಆ ಮಂತ್ರಿ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಸಿಎಂ ಯಾವುದೇ ರೀತಿ ಉತ್ತರ ನೀಡಿಲ್ಲ'' ಎಂದರು.

 

ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 

'ಸಾಕಷ್ಟು ಜನ ಬಿಜೆಪಿಯವರು ,ಜನತಾದಳದವರು ಕಾಂಗ್ರೆಸ್ ಸೇರ್ಪಡೆಗೆ ತಯಾರಾಗಿದ್ದಾರೆ.  ಸೂಕ್ತ ಸಂದರ್ಭದಲ್ಲಿ ಅವರ ಅರ್ಜಿ ಹೈಕಮಾಂಡ್ ಗೆ ಕಳಿಸಿಕೊಡ್ತೀವಿ. ಸೇರಿಸಿಕೊಳ್ಳುವ ಬಗ್ಗೆ ಕಮಿಟಿ ತೀರ್ಮಾನ ಮಾಡಲಿದೆ. ಇನ್ನು ಡಿಕೆಶಿ ಜೊತೆ ಆನಂದ್ ಸಿಂಗ್ ನಿರಂತರ ಸಂಪರ್ಕ ವಿಚಾರವಾಗಿ,  ಕಾಲಗರ್ಭದಲ್ಲಿ ಏನೇನು ಅಡಗಿದೆಯೋ ಯಾರಿಗೆ ಗೊತ್ತಿಲ್ಲ ಎಂದರು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more