Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Published : Jan 01, 2022, 03:46 PM ISTUpdated : Jan 01, 2022, 03:55 PM IST

ಕೆಪಿಸಿಸಿ (KPCC) ಕಾರ್ಯಾದ್ಯಕ್ಷ ಸಲೀಂ ಅಹ್ಮದ್ (Salim Ahmad)  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಮೇಕೆದಾಟುವಿನಿಂದ (Mekwdatu) ಬೆಂಗಳೂರುವರೆಗೆ (Bengaluru) ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 
 

ಹಾವೇರಿ (ಜ. 01): ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.  ' ಸ್ಥಳೀಯ  ಸಂಸ್ಥೆಗಳ ಚುನಾವಣೆಗಳಲ್ಲಿ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಆಡಳಿತದಿಂದ ಜನ ಭ್ರಮ ನಿರಸ ಆಗಿದ್ದಾರೆ. ತಾ.ಪಂ ಜಿ.ಪಂ  ಚುನಾವಣೆಯಲ್ಲೂ ಕೂಡಾ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಮುಂದಿನ ವಿಧಾನಸಭಾ  ಚುನಾವಣೆಯಲ್ಲಿ ಜನ  ಕಾಂಗ್ರೆಸ್ 150 ಸೀಟ್ ಗೆಲ್ಲಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಭ್ರಷ್ಟಾಚಾರ ತಡೆಯಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಮಂತ್ರಿಗಳು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಕಾಂಟ್ರಾಕ್ಟರ್  ಗಳು ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿಗಳ ಕಾರ್ಯಾಲಯದಿಂದ ಯಾವುದೇ ಉತ್ತರ ನೀಡಿಲ್ಲ. ನ ಖಾವೂಂವಾ , ನ ಖಾನೆ ದೂಂಗಾ ಅನ್ನೋ ಪ್ರೈಮ್ ಮಿನಿಸ್ಟರ್ ಇದನ್ನ ತನಿಖೆಯನ್ನೇ ನಡೆಸಿಲ್ಲ. ಸಚಿವ ಭೈರತಿ ಬಸವರಾಜ ಮೇಲೆ ಭೂ ಹಗರಣದ ಆರೋಪ ಕೂಡಾ ಬಂದಿದೆ.  ಆ ಮಂತ್ರಿ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಸಿಎಂ ಯಾವುದೇ ರೀತಿ ಉತ್ತರ ನೀಡಿಲ್ಲ'' ಎಂದರು.

 

ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 

'ಸಾಕಷ್ಟು ಜನ ಬಿಜೆಪಿಯವರು ,ಜನತಾದಳದವರು ಕಾಂಗ್ರೆಸ್ ಸೇರ್ಪಡೆಗೆ ತಯಾರಾಗಿದ್ದಾರೆ.  ಸೂಕ್ತ ಸಂದರ್ಭದಲ್ಲಿ ಅವರ ಅರ್ಜಿ ಹೈಕಮಾಂಡ್ ಗೆ ಕಳಿಸಿಕೊಡ್ತೀವಿ. ಸೇರಿಸಿಕೊಳ್ಳುವ ಬಗ್ಗೆ ಕಮಿಟಿ ತೀರ್ಮಾನ ಮಾಡಲಿದೆ. ಇನ್ನು ಡಿಕೆಶಿ ಜೊತೆ ಆನಂದ್ ಸಿಂಗ್ ನಿರಂತರ ಸಂಪರ್ಕ ವಿಚಾರವಾಗಿ,  ಕಾಲಗರ್ಭದಲ್ಲಿ ಏನೇನು ಅಡಗಿದೆಯೋ ಯಾರಿಗೆ ಗೊತ್ತಿಲ್ಲ ಎಂದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more