Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Published : Jan 01, 2022, 03:46 PM ISTUpdated : Jan 01, 2022, 03:55 PM IST

ಕೆಪಿಸಿಸಿ (KPCC) ಕಾರ್ಯಾದ್ಯಕ್ಷ ಸಲೀಂ ಅಹ್ಮದ್ (Salim Ahmad)  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಮೇಕೆದಾಟುವಿನಿಂದ (Mekwdatu) ಬೆಂಗಳೂರುವರೆಗೆ (Bengaluru) ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 
 

ಹಾವೇರಿ (ಜ. 01): ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.  ' ಸ್ಥಳೀಯ  ಸಂಸ್ಥೆಗಳ ಚುನಾವಣೆಗಳಲ್ಲಿ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಆಡಳಿತದಿಂದ ಜನ ಭ್ರಮ ನಿರಸ ಆಗಿದ್ದಾರೆ. ತಾ.ಪಂ ಜಿ.ಪಂ  ಚುನಾವಣೆಯಲ್ಲೂ ಕೂಡಾ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಮುಂದಿನ ವಿಧಾನಸಭಾ  ಚುನಾವಣೆಯಲ್ಲಿ ಜನ  ಕಾಂಗ್ರೆಸ್ 150 ಸೀಟ್ ಗೆಲ್ಲಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಭ್ರಷ್ಟಾಚಾರ ತಡೆಯಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಮಂತ್ರಿಗಳು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಕಾಂಟ್ರಾಕ್ಟರ್  ಗಳು ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿಗಳ ಕಾರ್ಯಾಲಯದಿಂದ ಯಾವುದೇ ಉತ್ತರ ನೀಡಿಲ್ಲ. ನ ಖಾವೂಂವಾ , ನ ಖಾನೆ ದೂಂಗಾ ಅನ್ನೋ ಪ್ರೈಮ್ ಮಿನಿಸ್ಟರ್ ಇದನ್ನ ತನಿಖೆಯನ್ನೇ ನಡೆಸಿಲ್ಲ. ಸಚಿವ ಭೈರತಿ ಬಸವರಾಜ ಮೇಲೆ ಭೂ ಹಗರಣದ ಆರೋಪ ಕೂಡಾ ಬಂದಿದೆ.  ಆ ಮಂತ್ರಿ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಸಿಎಂ ಯಾವುದೇ ರೀತಿ ಉತ್ತರ ನೀಡಿಲ್ಲ'' ಎಂದರು.

 

ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 

'ಸಾಕಷ್ಟು ಜನ ಬಿಜೆಪಿಯವರು ,ಜನತಾದಳದವರು ಕಾಂಗ್ರೆಸ್ ಸೇರ್ಪಡೆಗೆ ತಯಾರಾಗಿದ್ದಾರೆ.  ಸೂಕ್ತ ಸಂದರ್ಭದಲ್ಲಿ ಅವರ ಅರ್ಜಿ ಹೈಕಮಾಂಡ್ ಗೆ ಕಳಿಸಿಕೊಡ್ತೀವಿ. ಸೇರಿಸಿಕೊಳ್ಳುವ ಬಗ್ಗೆ ಕಮಿಟಿ ತೀರ್ಮಾನ ಮಾಡಲಿದೆ. ಇನ್ನು ಡಿಕೆಶಿ ಜೊತೆ ಆನಂದ್ ಸಿಂಗ್ ನಿರಂತರ ಸಂಪರ್ಕ ವಿಚಾರವಾಗಿ,  ಕಾಲಗರ್ಭದಲ್ಲಿ ಏನೇನು ಅಡಗಿದೆಯೋ ಯಾರಿಗೆ ಗೊತ್ತಿಲ್ಲ ಎಂದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more