Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Published : Jan 01, 2022, 03:46 PM ISTUpdated : Jan 01, 2022, 03:55 PM IST

ಕೆಪಿಸಿಸಿ (KPCC) ಕಾರ್ಯಾದ್ಯಕ್ಷ ಸಲೀಂ ಅಹ್ಮದ್ (Salim Ahmad)  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಮೇಕೆದಾಟುವಿನಿಂದ (Mekwdatu) ಬೆಂಗಳೂರುವರೆಗೆ (Bengaluru) ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 
 

ಹಾವೇರಿ (ಜ. 01): ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.  ' ಸ್ಥಳೀಯ  ಸಂಸ್ಥೆಗಳ ಚುನಾವಣೆಗಳಲ್ಲಿ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಆಡಳಿತದಿಂದ ಜನ ಭ್ರಮ ನಿರಸ ಆಗಿದ್ದಾರೆ. ತಾ.ಪಂ ಜಿ.ಪಂ  ಚುನಾವಣೆಯಲ್ಲೂ ಕೂಡಾ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಮುಂದಿನ ವಿಧಾನಸಭಾ  ಚುನಾವಣೆಯಲ್ಲಿ ಜನ  ಕಾಂಗ್ರೆಸ್ 150 ಸೀಟ್ ಗೆಲ್ಲಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಭ್ರಷ್ಟಾಚಾರ ತಡೆಯಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಮಂತ್ರಿಗಳು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಕಾಂಟ್ರಾಕ್ಟರ್  ಗಳು ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿಗಳ ಕಾರ್ಯಾಲಯದಿಂದ ಯಾವುದೇ ಉತ್ತರ ನೀಡಿಲ್ಲ. ನ ಖಾವೂಂವಾ , ನ ಖಾನೆ ದೂಂಗಾ ಅನ್ನೋ ಪ್ರೈಮ್ ಮಿನಿಸ್ಟರ್ ಇದನ್ನ ತನಿಖೆಯನ್ನೇ ನಡೆಸಿಲ್ಲ. ಸಚಿವ ಭೈರತಿ ಬಸವರಾಜ ಮೇಲೆ ಭೂ ಹಗರಣದ ಆರೋಪ ಕೂಡಾ ಬಂದಿದೆ.  ಆ ಮಂತ್ರಿ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಸಿಎಂ ಯಾವುದೇ ರೀತಿ ಉತ್ತರ ನೀಡಿಲ್ಲ'' ಎಂದರು.

 

ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 

'ಸಾಕಷ್ಟು ಜನ ಬಿಜೆಪಿಯವರು ,ಜನತಾದಳದವರು ಕಾಂಗ್ರೆಸ್ ಸೇರ್ಪಡೆಗೆ ತಯಾರಾಗಿದ್ದಾರೆ.  ಸೂಕ್ತ ಸಂದರ್ಭದಲ್ಲಿ ಅವರ ಅರ್ಜಿ ಹೈಕಮಾಂಡ್ ಗೆ ಕಳಿಸಿಕೊಡ್ತೀವಿ. ಸೇರಿಸಿಕೊಳ್ಳುವ ಬಗ್ಗೆ ಕಮಿಟಿ ತೀರ್ಮಾನ ಮಾಡಲಿದೆ. ಇನ್ನು ಡಿಕೆಶಿ ಜೊತೆ ಆನಂದ್ ಸಿಂಗ್ ನಿರಂತರ ಸಂಪರ್ಕ ವಿಚಾರವಾಗಿ,  ಕಾಲಗರ್ಭದಲ್ಲಿ ಏನೇನು ಅಡಗಿದೆಯೋ ಯಾರಿಗೆ ಗೊತ್ತಿಲ್ಲ ಎಂದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more