News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

Published : May 20, 2024, 10:56 PM IST

ಹೊಳೆನರಸೀಪುರ ಕೇಸ್​ನಲ್ಲೂ ರೇವಣ್ಣಗೆ ಜಾಮೀನು ಸಕ್ಕಿದೆ. ವಿದೇಶದಲ್ಲಿ ಇರುವ ಪ್ರಜ್ವಲ್​ಗೆ ಎಚ್‌ಡಿಕೆ ಡೆಡ್​ಲೈನ್​ ನೀಡಿದ್ದಾರೆ. 24 ಗಂಟೆಯಲ್ಲೇ ಬಂದು ವಿಚಾರಣೆ ಎದುರಿಸಲು ಮನವಿ ಮಾಡಿದ್ದಾರೆ.
 

ಬೆಂಗಳೂರು (ಮೇ. 20): ರಾಜ್ಯ ರಾಜಕೀಯವನ್ನೇ ಅಲ್ಲೋಲ ಕಲ್ಲೋಲ ಮಾಡಿರುವ, ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ದಿನಕಳೆದಂತೆ ಪ್ರಜ್ವಲ್​ ಕೊರಳಿಗೆ ಕಾನೂನಿನ ಉರುಳು ಬಿಗಿಯಾಗ್ತಿದ್ದು ವಿಚಾರಣೆಗೆ ಹಾಜರಾಗಬೇಕಿದ್ದ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 

ಪ್ರಜ್ವಲ್ ಈ ನಡೆಯಿಂದ ದೇವೇಗೌಡರ ಕುಟುಂಬಕ್ಕೆ ಮುಜುಗರವಾಗಿದ್ದು, ಮನಸ್ನಿನಲ್ಲಿ ಬಚ್ಚಿಟ್ಟುಕೊಂಡಿದ್ದ ನೋವನ್ನು ಇಂದು ಎಚ್​ಡಿಕೆ ಹೊರ ಹಾಕಿದ್ದಾರೆ. ಇಂದು ಮಾತನಾಡಿದ ಎಚ್‌ಡಿಕೆ, 24 ಗಂಟೆಯ ಒಳಗಾಗಿ ತನಿಖೆ ಎದುರಿಸುವಂತೆ ಮನವಿ ಮಾಡಿದ್ದಾರೆ. ದೇವೇಗೌಡರ ಮೇಲೆ ಗೌರವ ಇದ್ದರೆ ತನಿಖೆಗೆ ಹಾಜರಾಗುವಂತೆ ಹೇಳಿದ್ದಾರೆ.

ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

ಇದು ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಕೊಟ್ಟ ನೇರ ಸಂದೇಶ...ಪ್ರಜ್ವಲ್​ನಿಂದ ದೇವೇಗೌಡರ ಕುಟುಂಬಕ್ಕೆ ಎಷ್ಟು ಮುಜುಗರ ಆಗಿದೆ ಎಂದು ಕುಮಾರಸ್ವಾಮಿಯೇ ಬಿಚ್ಚಿಟ್ಟಿದ್ದಾರೆ.. ಪ್ರಜ್ವಲ್ ಎಲ್ಲೇ ಇದ್ರೂ ಎಸ್ಐಟಿ ಮುಂದೆ ಬರಲಿ.. 24 ಗಂಟೆಯೊಳಗೆ ತನಿಖೆ ಎದುರಿಸಲಿ.. ದೇವೇಗೌಡರ ಮೇಲೆ ಗೌರವವಿದ್ದರೆ, ಕಾರ್ಯಕರ್ತರ ಮೇಲೆ ಗೌರವವಿದ್ದರೆ ತಕ್ಷಣಕ್ಕೆ ಎಸ್​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಎಚ್​ಡಿಕೆ ಬಹಿರಂಗವಾಗೇ ಪ್ರಜ್ವಲ್​ಗೆ  ತಾಕೀತು ಮಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more