HDK vs Siddaramaiah: ನಮ್ಮದು JDF ಅಂತಾರೆ ಅವರದ್ದು SCF ಸೂತ್ರ: ಸಿದ್ದುಗೆ ಎಚ್‌ಡಿಕೆ ಗುದ್ದು

HDK vs Siddaramaiah: ನಮ್ಮದು JDF ಅಂತಾರೆ ಅವರದ್ದು SCF ಸೂತ್ರ: ಸಿದ್ದುಗೆ ಎಚ್‌ಡಿಕೆ ಗುದ್ದು

Suvarna News   | Asianet News
Published : Dec 08, 2021, 04:33 PM ISTUpdated : Dec 08, 2021, 04:39 PM IST

ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ: HDK

ಬೆಂಗಳೂರು (ಡಿ. 08): ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ.  ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ' ಎಂದು ಲೇವಡಿ ಮಾಡಿದ್ದಾರೆ. 

ಚುನಾವಣೆ ಬಂದರೆ ಜೆಡಿಎಸ್‌ಗೆ ಚಳಿ- ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಹೊಸ ಔಷಧವೇ JDF. ಟಾನಿಕ್ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ ಎಂದು ಸಿದ್ದು ಟೀಕೆಗೆ ಎಚ್‌ಡಿಕೆ ಉತ್ತರ ಕೊಟ್ಟಿದ್ದಾರೆ. ನಮ್ಮದು JDF ಅಂತಾರೆ ಅವರದ್ದು SCF (ಸಿದ್ದರಾಮಯ್ಯ ಕಾಂಗ್ರೆಸ್ ಫ್ಯಾಮಿಲಿ) ಸೂತ್ರ ಅಲ್ವಾ.? ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more