BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

Suvarna News   | Asianet News
Published : Nov 17, 2021, 03:10 PM ISTUpdated : Nov 17, 2021, 04:30 PM IST

- 2018 ರಲ್ಲೇ ಎಚ್‌ಡಿಕೆ ಎಚ್ಚರಿಸಿದ್ದರೂ ಸಿದ್ದು ‘ಬಿಟ್‌’ ಹಾಕಿದ್ದರು: ಬಿಜೆಪಿ

- ನಲಪಾಡ್‌ ಹಲ್ಲೆ ಘಟನೆ ಕ್ಷುಲ್ಲಕ ಕಾರಣಕ್ಕೆ ನಡೆದಿಲ್ಲ

ಹ್ಯಾಕಿಂಗ್‌, ಬಿಟ್‌ಕಾಯಿನ್‌, ಹವಾಲಾ ಕೈವಾಡ ಇತ್ತು

 

ಬೆಂಗಳೂರು (ನ. 17): 3 ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ (Bitcoin Scam) ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರು. ಆಗ ವಿರೋಧ ಪಕ್ಷದಲ್ಲಿದ್ದ ಕುಮಾರಸ್ವಾಮಿ ಅವರು ನಲಪಾಡ್‌ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆಯಿದೆ ಎಂಬ ಗಂಭೀರ ಆರೋಪವನ್ನು ಹುಬ್ಬಳ್ಳಿಯಲ್ಲಿ ಮಾಡಿದ್ದರು. ಆದರೆ, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಆ ಆರೋಪವನ್ನು ಕಿವಿಗೇ ಹಾಕಿಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿದೆ. 

ಯುಬಿ ಸಿಟಿ ಗಲಾಟೆ ಪ್ರಕರಣದ ಸಂಬಂಧ 2018ರ ಅಕ್ಟೋಬರ್‌ 5ರಂದು ಶ್ರೀಕಿ ಹೈಕೋರ್ಟ್‌ನಲ್ಲಿ ಜಾಮೀನು ಪಡೆಯುತ್ತಾನೆ. ಆದರೆ ಜಾಮೀನು ಪಡೆಯದಂತೆ ಆಗಿನ ಕಾಂಗ್ರೆಸ್‌ ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ. ಜಾಮೀನು ತೆಗೆದುಕೊಂಡ ನಂತರ ಶ್ರೀಕಿಯನ್ನು ಪೊಲೀಸ್‌ ಠಾಣೆಗೆ ಕರೆಸಿ ಯಾಕೆ ವಿಚಾರಣೆ ನಡೆಸಲಿಲ್ಲ? ಈ ರೀತಿ ಮಾಡದಂತೆ ತಡೆದದ್ದು ಯಾರು? 2018ರಲ್ಲೇ ಶ್ರೀಕಿ ತಾನು ಹ್ಯಾಕ್‌ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದರೂ ಆತನ ವಿರುದ್ಧ ಯಾಕೆ ಪ್ರಕರಣ ದಾಖಲಿಸಲಿಲ್ಲ? ಆತನಿಗೆ ರಾಜಾತಿಥ್ಯ ಕೊಟ್ಟವರು ಯಾರು ಎಂಬುದಕ್ಕೆ ಕಾಂಗ್ರೆಸ್‌ ಮುಖಂಡರು ಉತ್ತರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more