BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

Suvarna News   | Asianet News
Published : Nov 17, 2021, 03:10 PM ISTUpdated : Nov 17, 2021, 04:30 PM IST

- 2018 ರಲ್ಲೇ ಎಚ್‌ಡಿಕೆ ಎಚ್ಚರಿಸಿದ್ದರೂ ಸಿದ್ದು ‘ಬಿಟ್‌’ ಹಾಕಿದ್ದರು: ಬಿಜೆಪಿ

- ನಲಪಾಡ್‌ ಹಲ್ಲೆ ಘಟನೆ ಕ್ಷುಲ್ಲಕ ಕಾರಣಕ್ಕೆ ನಡೆದಿಲ್ಲ

ಹ್ಯಾಕಿಂಗ್‌, ಬಿಟ್‌ಕಾಯಿನ್‌, ಹವಾಲಾ ಕೈವಾಡ ಇತ್ತು

 

ಬೆಂಗಳೂರು (ನ. 17): 3 ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ (Bitcoin Scam) ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರು. ಆಗ ವಿರೋಧ ಪಕ್ಷದಲ್ಲಿದ್ದ ಕುಮಾರಸ್ವಾಮಿ ಅವರು ನಲಪಾಡ್‌ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆಯಿದೆ ಎಂಬ ಗಂಭೀರ ಆರೋಪವನ್ನು ಹುಬ್ಬಳ್ಳಿಯಲ್ಲಿ ಮಾಡಿದ್ದರು. ಆದರೆ, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಆ ಆರೋಪವನ್ನು ಕಿವಿಗೇ ಹಾಕಿಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿದೆ. 

ಯುಬಿ ಸಿಟಿ ಗಲಾಟೆ ಪ್ರಕರಣದ ಸಂಬಂಧ 2018ರ ಅಕ್ಟೋಬರ್‌ 5ರಂದು ಶ್ರೀಕಿ ಹೈಕೋರ್ಟ್‌ನಲ್ಲಿ ಜಾಮೀನು ಪಡೆಯುತ್ತಾನೆ. ಆದರೆ ಜಾಮೀನು ಪಡೆಯದಂತೆ ಆಗಿನ ಕಾಂಗ್ರೆಸ್‌ ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ. ಜಾಮೀನು ತೆಗೆದುಕೊಂಡ ನಂತರ ಶ್ರೀಕಿಯನ್ನು ಪೊಲೀಸ್‌ ಠಾಣೆಗೆ ಕರೆಸಿ ಯಾಕೆ ವಿಚಾರಣೆ ನಡೆಸಲಿಲ್ಲ? ಈ ರೀತಿ ಮಾಡದಂತೆ ತಡೆದದ್ದು ಯಾರು? 2018ರಲ್ಲೇ ಶ್ರೀಕಿ ತಾನು ಹ್ಯಾಕ್‌ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದರೂ ಆತನ ವಿರುದ್ಧ ಯಾಕೆ ಪ್ರಕರಣ ದಾಖಲಿಸಲಿಲ್ಲ? ಆತನಿಗೆ ರಾಜಾತಿಥ್ಯ ಕೊಟ್ಟವರು ಯಾರು ಎಂಬುದಕ್ಕೆ ಕಾಂಗ್ರೆಸ್‌ ಮುಖಂಡರು ಉತ್ತರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more