BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

BitCoin Scam: 2018 ರಲ್ಲೇ ಬಿಟ್‌ಕಾಯಿನ್ ಬಾಂಬ್ ಹಾಕಿದ್ರು ಎಚ್‌ಡಿಕೆ, ಸಿದ್ದುಗೆ ಬಿಜೆಪಿ ಪ್ರಶ್ನೆ

Suvarna News   | Asianet News
Published : Nov 17, 2021, 03:10 PM ISTUpdated : Nov 17, 2021, 04:30 PM IST

- 2018 ರಲ್ಲೇ ಎಚ್‌ಡಿಕೆ ಎಚ್ಚರಿಸಿದ್ದರೂ ಸಿದ್ದು ‘ಬಿಟ್‌’ ಹಾಕಿದ್ದರು: ಬಿಜೆಪಿ

- ನಲಪಾಡ್‌ ಹಲ್ಲೆ ಘಟನೆ ಕ್ಷುಲ್ಲಕ ಕಾರಣಕ್ಕೆ ನಡೆದಿಲ್ಲ

ಹ್ಯಾಕಿಂಗ್‌, ಬಿಟ್‌ಕಾಯಿನ್‌, ಹವಾಲಾ ಕೈವಾಡ ಇತ್ತು

 

ಬೆಂಗಳೂರು (ನ. 17): 3 ವರ್ಷದ ಹಿಂದೆ ನಗರದ ಯುಬಿ ಸಿಟಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ಗಲಾಟೆ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆ (Bitcoin Scam) ಇದೆ ಎಂಬ ಶಂಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗಲೇ ವ್ಯಕ್ತಪಡಿಸಿದ್ದರು. ಆಗ ವಿರೋಧ ಪಕ್ಷದಲ್ಲಿದ್ದ ಕುಮಾರಸ್ವಾಮಿ ಅವರು ನಲಪಾಡ್‌ ಪ್ರಕರಣದ ಹಿಂದೆ ಬಿಟ್‌ ಕಾಯಿನ್‌ ದಂಧೆಯಿದೆ ಎಂಬ ಗಂಭೀರ ಆರೋಪವನ್ನು ಹುಬ್ಬಳ್ಳಿಯಲ್ಲಿ ಮಾಡಿದ್ದರು. ಆದರೆ, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಆ ಆರೋಪವನ್ನು ಕಿವಿಗೇ ಹಾಕಿಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿದೆ. 

ಯುಬಿ ಸಿಟಿ ಗಲಾಟೆ ಪ್ರಕರಣದ ಸಂಬಂಧ 2018ರ ಅಕ್ಟೋಬರ್‌ 5ರಂದು ಶ್ರೀಕಿ ಹೈಕೋರ್ಟ್‌ನಲ್ಲಿ ಜಾಮೀನು ಪಡೆಯುತ್ತಾನೆ. ಆದರೆ ಜಾಮೀನು ಪಡೆಯದಂತೆ ಆಗಿನ ಕಾಂಗ್ರೆಸ್‌ ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ. ಜಾಮೀನು ತೆಗೆದುಕೊಂಡ ನಂತರ ಶ್ರೀಕಿಯನ್ನು ಪೊಲೀಸ್‌ ಠಾಣೆಗೆ ಕರೆಸಿ ಯಾಕೆ ವಿಚಾರಣೆ ನಡೆಸಲಿಲ್ಲ? ಈ ರೀತಿ ಮಾಡದಂತೆ ತಡೆದದ್ದು ಯಾರು? 2018ರಲ್ಲೇ ಶ್ರೀಕಿ ತಾನು ಹ್ಯಾಕ್‌ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದರೂ ಆತನ ವಿರುದ್ಧ ಯಾಕೆ ಪ್ರಕರಣ ದಾಖಲಿಸಲಿಲ್ಲ? ಆತನಿಗೆ ರಾಜಾತಿಥ್ಯ ಕೊಟ್ಟವರು ಯಾರು ಎಂಬುದಕ್ಕೆ ಕಾಂಗ್ರೆಸ್‌ ಮುಖಂಡರು ಉತ್ತರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more