ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಮೃತದೇಹ ಪತ್ತೆ: ಜಲಸಮಾಧಿಯಾದ ಮಗ..ಪೋಷಕರ ಆಕ್ರಂದನ

Published : Jul 31, 2023, 10:00 AM IST

ರಾಜ್ಯದಲ್ಲಿ ಮಳೆ ನಿಂತರೂ ಮುಂದುವರೆದ ಅವಾಂತರ
ನೀರಿನಲ್ಲಿ ಕೊಚ್ಚಿಹೋಗಿದ್ದ ಶರತ್ ಶವವಾಗಿ ಪತ್ತೆ
8 ದಿನಗಳ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ
 

ರೀಲ್ಸ್ ಮಾಡುವಾಗ ಕಾಲು ಜಾರಿ ಜಲಪಾತದ(Waterfall) ನೀರಿನಲ್ಲಿ ಕೊಚ್ಚಿಹೋಗಿದ್ದ ಶಿವಮೊಗ್ಗದ ಶರತ್(Sharat), ಶವವಾಗಿ ಪತ್ತೆಯಾಗಿದ್ದಾನೆ. ಸತತ 8 ದಿನಗಳ ಕಾರ್ಯಾಚರಣೆ ಬಳಿಕ ಶರತ್ ಮೃತದೇಹ ಪತ್ತೆಯಾಗಿದೆ. ಮಗ ಬದುಕಿ ಬರಬಹುದೆಂಬ ಕುಟುಂಬದ ನಿರೀಕ್ಷೆ ಸುಳ್ಳಾಗಿದೆ. ನೀರಿನಲ್ಲಿ ಕೊಚ್ಚಿಹೋದ ಶರತ್ ಪತ್ತೆಗಾಗಿ ನಿರಂತರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಹುಡುಕಾಡಿದ್ರೂ ಶರತ್ ಸುಳಿವು ಮಾತ್ರ ಪತ್ತೆಯಾಗಿರತಲೇ ಇಲ್ಲ. ಸತತ 8 ದಿನಗಳ ಶೋಧದ ಬಳಿಕ ನಿನ್ನೆ ಜಲಪಾತದ ಬುಡದಲ್ಲಿದ್ದ ಮರದ ಪೊಟರೆಯಲ್ಲಿ ಶರತ್ ಮೃತದೇಹ ಪತ್ತೆಯಾಗಿದೆ. ಇನ್ನೂ ಉತ್ತರ ಕನ್ನಡದ(uttara kannada) ಕುಮಟಾದಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ದೇವಿಮನೆ ಘಾಟ್ ಹತ್ತಿರದ ರಾಗಿಹೊಸಳ್ಳಿ ಬಳಿ ಗುಡ್ಡ ಕುಸಿದಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಭಾರೀ ಪ್ರಮಾಣದ ಮಣ್ಣಿನ ಜತೆ ಮರಗಳು(Trees) ಧರೆಗುರುಳಿವೆ. ಹೆದ್ದಾರಿ ಬಿಟ್ಟು ಕಚ್ಚಾ ರಸ್ತೆಯಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ವರ್ಷಧಾರೆಯಿಂದಾಗಿ ಬೆಳಗಾವಿಯ ಜಲಪಾತಗಳಿಗೆ ಜೀವಕಳೆ ಬಂದಿದೆ. ಖಾನಾಪುರ ತಾಲೂಕಿನ ಚಿಕಲೆ ಫಾಲ್ಸ್‌ ಜಲವೈಭೋಗ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. 

ಇದನ್ನೂ ವೀಕ್ಷಿಸಿ:  ಶಂಕಿತ ಉಗ್ರರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು: ಜಾಹೀದ್‌ಗೆ 4 ಗ್ರೆನೇಡ್ ತಲುಪಿಸಿದ್ದ ಕೊಲೆ ಆರೋಪಿ !

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more