ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ  ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

Published : Jul 19, 2024, 04:53 PM IST

ಅದೆಷ್ಟು ಭಯಾನಕವಾಗಿದೆ ಗೊತ್ತಾ ವರುಣನ ರಣಾರ್ಭಟ!
ಧರೆಗುರುಳಿದ ಮನೆಗಳು..ಸರ್ವನಾಶವಾದ ಕೃಷಿಭೂಮಿ..! 
ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ..ತಪ್ಪಿತು ದುರಂತ

ಅರಬ್ಬೀ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ(Low-pressure area). ಅದರ ಇಂಪ್ಯಾಕ್ಟ್ ಅನ್ನೋ ಹಾಗೆ ರಾಜ್ಯದಲ್ಲಿ ಮುಂಗಾರು ಅಬ್ಬರಿಸ್ತಾ ಇದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ(Rain) ಮುನ್ಸೂಚನೆ ಕೊಟ್ಟಿತ್ತು ರಾಜ್ಯ ಹವಾಮಾನ ಇಲಾಖೆ (Weather department). ಆ ಮುನ್ಸೂಚನೆ ನಿಜವಾಗಿಸೋಕೆ ರಣಮಳ ಸುರಿಯುತ್ತಲೇ ಇದೆ. ಅದರ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ, ಅಂದ್ರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಈ ಕ್ಷಣಕ್ಕೂ ಮುಂದುವರೆದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಹತ್ರ, ಚಲಿಸುತ್ತಿದ್ದ ಕಾರಿನ ಮೇಲೆನೇ ಏಕಾಏಕಿ ಗುಡ್ಡ ಕುಸಿದಿದೆ. ಕಾರಿನ ಮೇಲೆ‌ ಭಾರೀ ಪ್ರಮಾಣದ ಮಣ್ಣಿನ ರಾಶಿ ಬಿದ್ದಿದ್ರಿಂದ, ಕಾರಿನಲ್ಲಿದ್ದವರಿಗೆ ಗಂಭೀರವಾಗಿಯೇ ಗಾಯಗಳಾಗಿದ್ದಾವೆ. ಇಂಥಾ ಅಪಾಯದ ಸೂಚನೆ  ಇರೋದ್ರಿಂದಲೇ ಶಿರಾಡಿಘಾಟ್‌ನಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಳೆಯ ಅಬ್ಬರ ಜೋರಾಗೇ ಇದೆ. ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರೀತಿದೆ. ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಳವಾಗಿರೋದ್ರಿಂದ, ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ಕೊಟ್ಟಿದಾರೆ.

ಇದನ್ನೂ ವೀಕ್ಷಿಸಿ:  ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more