ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ  ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

ಭೂಕುಸಿತ, ಪ್ರವಾಹ ಭೀತಿ, ಇನ್ನೆಷ್ಟು ಕಾಲ ಈ ಜಲದಿಗ್ಬಂಧನ? ಯಾವ್ಯಾವ ಜಿಲ್ಲೆಗಳ ಪರಿಸ್ಥಿತಿ ಏನಾಗಿದೆ..?

Published : Jul 19, 2024, 04:53 PM IST

ಅದೆಷ್ಟು ಭಯಾನಕವಾಗಿದೆ ಗೊತ್ತಾ ವರುಣನ ರಣಾರ್ಭಟ!
ಧರೆಗುರುಳಿದ ಮನೆಗಳು..ಸರ್ವನಾಶವಾದ ಕೃಷಿಭೂಮಿ..! 
ಕೂದಲೆಳೆ ಅಂತರದಲ್ಲಿ ಉಳಿಯಿತು ಜೀವ..ತಪ್ಪಿತು ದುರಂತ

ಅರಬ್ಬೀ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ(Low-pressure area). ಅದರ ಇಂಪ್ಯಾಕ್ಟ್ ಅನ್ನೋ ಹಾಗೆ ರಾಜ್ಯದಲ್ಲಿ ಮುಂಗಾರು ಅಬ್ಬರಿಸ್ತಾ ಇದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ(Rain) ಮುನ್ಸೂಚನೆ ಕೊಟ್ಟಿತ್ತು ರಾಜ್ಯ ಹವಾಮಾನ ಇಲಾಖೆ (Weather department). ಆ ಮುನ್ಸೂಚನೆ ನಿಜವಾಗಿಸೋಕೆ ರಣಮಳ ಸುರಿಯುತ್ತಲೇ ಇದೆ. ಅದರ ಪರಿಣಾಮವಾಗಿ ಕರಾವಳಿ ಜಿಲ್ಲೆಗಳಲ್ಲಿ, ಅಂದ್ರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಈ ಕ್ಷಣಕ್ಕೂ ಮುಂದುವರೆದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಹತ್ರ, ಚಲಿಸುತ್ತಿದ್ದ ಕಾರಿನ ಮೇಲೆನೇ ಏಕಾಏಕಿ ಗುಡ್ಡ ಕುಸಿದಿದೆ. ಕಾರಿನ ಮೇಲೆ‌ ಭಾರೀ ಪ್ರಮಾಣದ ಮಣ್ಣಿನ ರಾಶಿ ಬಿದ್ದಿದ್ರಿಂದ, ಕಾರಿನಲ್ಲಿದ್ದವರಿಗೆ ಗಂಭೀರವಾಗಿಯೇ ಗಾಯಗಳಾಗಿದ್ದಾವೆ. ಇಂಥಾ ಅಪಾಯದ ಸೂಚನೆ  ಇರೋದ್ರಿಂದಲೇ ಶಿರಾಡಿಘಾಟ್‌ನಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಳೆಯ ಅಬ್ಬರ ಜೋರಾಗೇ ಇದೆ. ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರೀತಿದೆ. ಧರ್ಮಸ್ಥಳದ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಳವಾಗಿರೋದ್ರಿಂದ, ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ಕೊಟ್ಟಿದಾರೆ.

ಇದನ್ನೂ ವೀಕ್ಷಿಸಿ:  ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more