ಇನ್ನೂ 5 ದಿನ ರಾಜ್ಯದಲ್ಲಿ ಮಳೆಯಾರ್ಭಟ: ನದಿಪಾತ್ರಗಳಲ್ಲಿ ಹೈ ಅಲರ್ಟ್

ಇನ್ನೂ 5 ದಿನ ರಾಜ್ಯದಲ್ಲಿ ಮಳೆಯಾರ್ಭಟ: ನದಿಪಾತ್ರಗಳಲ್ಲಿ ಹೈ ಅಲರ್ಟ್

Published : Aug 04, 2022, 04:42 PM IST

ಉಡುಪಿಯ ಶಿರೂರಿನಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿದೆ. ಮಾತ್ರವಲ್ಲದೇ ಮನೆಗಳಿಗೆ ನೀರು ಸಹ ನುಗ್ಗಿದೆ. ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನದಿಪಾತ್ರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರು (ಆ.04): ಉಡುಪಿಯ ಶಿರೂರಿನಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿದೆ. ಮಾತ್ರವಲ್ಲದೇ ಮನೆಗಳಿಗೆ ನೀರು ಸಹ ನುಗ್ಗಿದೆ. ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನದಿಪಾತ್ರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಈ ವರುಣಾರ್ಭಟಕ್ಕೆ ಜನಜೀವನ ಅಯೋಮಯವಾಗಿದ್ದು, 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇನ್ನು ಗುಡ್ಡಗಳು ಕುಸಿಯುತ್ತಿದ್ದು, ರಸ್ತೆಗಳು ಕೆರೆಯಂತಾಗಿವೆ. ಹಲವು ಮನೆಗಳು ಜಲಾವೃತವಾಗಿದ್ದು, ರಾತ್ರಿಯೀಡಿ ಜನರು ಜಾಗರಣೆ ಮಾಡಿದ್ದಾರೆ. ಇನ್ನು ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರ ಸಂಕಟ ಹೇಳತೀರದಾಗಿದೆ. ಸದ್ಯ ಸುರಿಯುತ್ತಿರುವ ಮಳೆ ಹಲವೆಡೆ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಕಂಟಕ ತಂದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ದೋಣಿಗಲ್‌ ಎಂಬಲ್ಲಿ ಕಳೆದ ತಿಂಗಳು ಭೂಕುಸಿತವಾದ ಹಿನ್ನೆಲೆಯಲ್ಲಿ ಆರಂಭದಲ್ಲಿ ಇಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಗೊಂಡಿದೆ. ಈಗ ಕೊಡಗು ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more