ಕೆ.ಸಿ ಜನರಲ್ ಆಸ್ಪತ್ರೆಗೆ ಹೈ-ಟೆಕ್ ಟಚ್‌: ಹಳೆಯ ಆಸ್ಪತ್ರೆಗೆ ಹೊಸ ರೂಪ ನೀಡಲು ಸಿದ್ಧತೆ

ಕೆ.ಸಿ ಜನರಲ್ ಆಸ್ಪತ್ರೆಗೆ ಹೈ-ಟೆಕ್ ಟಚ್‌: ಹಳೆಯ ಆಸ್ಪತ್ರೆಗೆ ಹೊಸ ರೂಪ ನೀಡಲು ಸಿದ್ಧತೆ

Published : Sep 10, 2023, 08:38 AM IST

ಆ ಆಸ್ಪತ್ರೆ ಪ್ರಸಿದ್ಧ ಹಾಗೂ ಹಳೆಯ ಆಸ್ಪತ್ರೆ. ದಿನ ಬೆಳಗಾದ್ರೆ ಸಾವಿರಾರು ಮಂದಿ ಚಿಕಿತ್ಸೆಗೆಂದು ಬಂದು ಹೋಗ್ತಾರೆ. ಆದ್ರೆ ಆಸ್ಪತ್ರೆ ಹಳೆಯದ್ದಾಗಿದ್ದರಿಂದ ಕೆಲ ಕಟ್ಟಡಗಳು ಶಿಥಿಗೊಂಡಿದ್ದವು. ಈ ಬಗ್ಗೆ ಸಾರ್ವಜನಿರಿಂದ ಸಾಲು, ಸಾಲು ದೂರು ಬಂದಿದ್ದವು. ಈ ಬೆನಲ್ಲೇ ಇದೀಗ ಆಸ್ಪತ್ರೆಯ  ರಿನೋವೇಷನ್ ಕಾರ್ಯ ಆರಂಭವಾಗಿದೆ.
 

ಇತ್ತೀಚೆಗೆ ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರ ಕೊರತೆ, ಉಪಕರಣಗಳ ಕೊರತೆಯೇ ಹೆಚ್ಚು. ಕೆಲ ಆಸ್ಪತ್ರೆಗಳಲ್ಲಿ ಕಟ್ಟಡಗಳು ಬೀಳೋ ಹಂತ ತಲುಪಿವೆ. ಇದರಿಂದ ನಿತ್ಯ ಸರ್ಕಾರಕ್ಕೆ ಹಾಗೂ ಆರೋಗ್ಯ ಇಲಾಖೆಗೆ(Health Department) ಸಾಲು, ಸಾಲು ದೂರುಗಳು ಬರ್ತಿವೆ. ಹೀಗಾಗಿ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಕೆಲ ಆಸ್ಪತ್ರೆಗಳಿಗೆ  ಹೈ-ಟೆಕ್ ಟಚ್ ನೀಡಲು ಮುಂದಾಗಿದೆ. ಹಳೆ ಹಾಗೂ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ(K.C.General Hospital) ಹೊಸ ರೂಪ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರಿ ಆಸ್ಪತ್ರೆಗಳು ಕಮ್ಮಿ ಇಲ್ಲ ಎಂಬಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ  ಹೈಟೆಕ್ ರೂಪ ನೀಡಲು ಸಿದ್ದತೆ ನಡೆದಿದ್ದು ಕೆಲಸಗಳು ಬರದಿಂದ ಸಾಗುತ್ತಿದೆ. ಇದಕ್ಕೂ ಮೊದಲು ನಗರದ ಅನೇಕ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao ) ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಂದೇ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದರು ಇದೀಗ ಕೆ.ಸಿ ಜನರಲ್ ಆಸ್ಪತ್ರೆಗೆ  ಹೊಸ ರೂಪ ನೀಡಲು ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಈ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಆಸ್ಪತ್ರೆಯ ‌ಸ್ಟ್ರಕ್ಚರ್ ಹಾಗೂ ಹೊಸ ಬಿಲ್ಡಿಂಗ್ ನಿರ್ಮಾಣಕ್ಕಾಗಿ ಇಂಜಿನಿಯರ್ಗಳೂ ಸ್ಥಳ ವೀಕ್ಷಣೆ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more