ಕೆ.ಸಿ ಜನರಲ್ ಆಸ್ಪತ್ರೆಗೆ ಹೈ-ಟೆಕ್ ಟಚ್‌: ಹಳೆಯ ಆಸ್ಪತ್ರೆಗೆ ಹೊಸ ರೂಪ ನೀಡಲು ಸಿದ್ಧತೆ

ಕೆ.ಸಿ ಜನರಲ್ ಆಸ್ಪತ್ರೆಗೆ ಹೈ-ಟೆಕ್ ಟಚ್‌: ಹಳೆಯ ಆಸ್ಪತ್ರೆಗೆ ಹೊಸ ರೂಪ ನೀಡಲು ಸಿದ್ಧತೆ

Published : Sep 10, 2023, 08:38 AM IST

ಆ ಆಸ್ಪತ್ರೆ ಪ್ರಸಿದ್ಧ ಹಾಗೂ ಹಳೆಯ ಆಸ್ಪತ್ರೆ. ದಿನ ಬೆಳಗಾದ್ರೆ ಸಾವಿರಾರು ಮಂದಿ ಚಿಕಿತ್ಸೆಗೆಂದು ಬಂದು ಹೋಗ್ತಾರೆ. ಆದ್ರೆ ಆಸ್ಪತ್ರೆ ಹಳೆಯದ್ದಾಗಿದ್ದರಿಂದ ಕೆಲ ಕಟ್ಟಡಗಳು ಶಿಥಿಗೊಂಡಿದ್ದವು. ಈ ಬಗ್ಗೆ ಸಾರ್ವಜನಿರಿಂದ ಸಾಲು, ಸಾಲು ದೂರು ಬಂದಿದ್ದವು. ಈ ಬೆನಲ್ಲೇ ಇದೀಗ ಆಸ್ಪತ್ರೆಯ  ರಿನೋವೇಷನ್ ಕಾರ್ಯ ಆರಂಭವಾಗಿದೆ.
 

ಇತ್ತೀಚೆಗೆ ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರ ಕೊರತೆ, ಉಪಕರಣಗಳ ಕೊರತೆಯೇ ಹೆಚ್ಚು. ಕೆಲ ಆಸ್ಪತ್ರೆಗಳಲ್ಲಿ ಕಟ್ಟಡಗಳು ಬೀಳೋ ಹಂತ ತಲುಪಿವೆ. ಇದರಿಂದ ನಿತ್ಯ ಸರ್ಕಾರಕ್ಕೆ ಹಾಗೂ ಆರೋಗ್ಯ ಇಲಾಖೆಗೆ(Health Department) ಸಾಲು, ಸಾಲು ದೂರುಗಳು ಬರ್ತಿವೆ. ಹೀಗಾಗಿ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಕೆಲ ಆಸ್ಪತ್ರೆಗಳಿಗೆ  ಹೈ-ಟೆಕ್ ಟಚ್ ನೀಡಲು ಮುಂದಾಗಿದೆ. ಹಳೆ ಹಾಗೂ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ(K.C.General Hospital) ಹೊಸ ರೂಪ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರಿ ಆಸ್ಪತ್ರೆಗಳು ಕಮ್ಮಿ ಇಲ್ಲ ಎಂಬಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ  ಹೈಟೆಕ್ ರೂಪ ನೀಡಲು ಸಿದ್ದತೆ ನಡೆದಿದ್ದು ಕೆಲಸಗಳು ಬರದಿಂದ ಸಾಗುತ್ತಿದೆ. ಇದಕ್ಕೂ ಮೊದಲು ನಗರದ ಅನೇಕ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao ) ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಂದೇ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದರು ಇದೀಗ ಕೆ.ಸಿ ಜನರಲ್ ಆಸ್ಪತ್ರೆಗೆ  ಹೊಸ ರೂಪ ನೀಡಲು ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಈ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಆಸ್ಪತ್ರೆಯ ‌ಸ್ಟ್ರಕ್ಚರ್ ಹಾಗೂ ಹೊಸ ಬಿಲ್ಡಿಂಗ್ ನಿರ್ಮಾಣಕ್ಕಾಗಿ ಇಂಜಿನಿಯರ್ಗಳೂ ಸ್ಥಳ ವೀಕ್ಷಣೆ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more