ವಸೂಲಿಗಿಳಿದ ಬಸ್‌ಗಳ ಮೇಲೆ ಅಧಿಕಾರಿಗಳ ರೇಡ್..60ಕ್ಕೂ ಹೆಚ್ಚು ಕೇಸ್ ದಾಖಲು

ವಸೂಲಿಗಿಳಿದ ಬಸ್‌ಗಳ ಮೇಲೆ ಅಧಿಕಾರಿಗಳ ರೇಡ್..60ಕ್ಕೂ ಹೆಚ್ಚು ಕೇಸ್ ದಾಖಲು

Published : Sep 15, 2023, 09:59 AM IST

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟಿದ್ದವರಿಗೆ ಖಾಸಗಿ ಬಸ್‌ಗಳು ಶಾಕ್ ನೀಡುತ್ತಿವೆ. ಯದ್ವಾ ತದ್ವಾ ಬಸ್ ಟಿಕೆಟ್ ದರ ಏರಿಸಿ ಸುಲಿಗೆಗೆ ಇಳಿದಿವೆ.  ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಬಿತ್ತರಿಸಿದ ಬೆನ್ನಲ್ಲೇ ಸುಲಿಗೆಗಿಳಿದ ಬಸ್ ಮಾಲೀಕರ ವಿರುದ್ಧ ಸಾರಿಗೆ ಅಧಿಕಾರಿಗಳು ಸಮರ ಸಾರಿದ್ದಾರೆ.
 

ಹಬ್ಬಗಳು ಬಂದ್ರೆ ಸಾಕು.. ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ ಹಬ್ಬದೂಟ. ಹಬ್ಬಕ್ಕೆ ಊರಿಗೆ ಹೋಗುವವರನ್ನೇ ಬಂಡವಾಳ ಮಾಡಿಕೊಂಡು ಬಸ್ ಟಿಕೆಟ್(Ticket) ದರಗಳನ್ನು ಯದ್ವಾ ತವ್ದಾ ಏರಿಸುತ್ತವೆ. ಈ ಬಾರಿಯೂ ಅಷ್ಟೇ.. ಗೌರಿ ಗಣೇಶ ಹಬ್ಬಕ್ಕೆ(Gauri Ganesha festival) ಊರಿಗ ಹೊರಟವರ ಸುಲಿಗೆಗೆ ಇಳಿದಿವೆ. ಸಾಮಾನ್ಯ ದಿನಗಳಲ್ಲಿ 500-700 ರೂ ಇದ್ದ ಟಿಕೆಟ್, ದರ ಈಗ 1500 - 2500ಕ್ಕೆ ತಲುಪಿದೆ. ಆನ್ ಲೈನ್ ಟಿಕೆಟ್ ಬುಕಿಂಗ್ ದರ ಸಾಮಾನ್ಯ ದಿನಕ್ಕಿಂತ ಎರಡು ಮೂರು ಪಟ್ಟು ಹೆಚ್ಚಳ ಮಾಡಿದ್ದಾರೆ. ಪ್ರಯಾಣಿಕರ ಸುಲಿಗೆಗೆ ಇಳಿದ ಖಾಸಗಿ ಬಸ್(Private buses) ಮಾಲೀಕರ ವಸೂಲಿ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ನಮ್ಮ ವರದಿ ಬೆನ್ನಲ್ಲೇ ಸಾರಿಗೆ ಅಧಿಕಾರಿಗಳು ಫೀಲ್ಡ್ಗೆ ಇಳಿದಿದ್ದಾರೆ. ಬಸ್ಗಳ ಮೇಲೆ ದಾಳಿ ಮಾಡಿದ ಆರ್ಟಿಒ ಅಧಿಕಾರಿಗಳು  ಟಿಕೆಟ್ ದರ ಪರಿಶೀಲಿಸಿದ್ದಾರೆ. ನಿಯಮ ಮೀರಿ ಟಿಕೆಟ್ ದರ ಏರಿಸಿದ್ದಕ್ಕೆ 60ಕ್ಕೂ ಹೆಚ್ಚು ಕೇಸ್ಗಳನ್ನ ದಾಖಲಿಸಿಕೊಂಡಿದ್ದಾರೆ. 

ಬಹುತೇಕ ಖಾಸಗಿ ಬಸ್‌ಗಳು ಪ್ರಯಾಣ ದರವನ್ನು ಹೆಚ್ಚಿಸಿವೆ. ಇನ್ನು ಕೆಲ ಟ್ರಾವೆಲ್ಸ್ಗಳಂತೂ ಆನ್ಲೈನ್ ಬುಕಿಂಗ್ ಮಾಡಿದ್ದನ್ನೇ ಕ್ಯಾನ್ಸಲ್ ಮಾಡಿ ಜಾಸ್ತಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಅನ್ನೋ ಸುದ್ದಿಗಳು ಇವೆ.. ಆದ್ರೆ ಟಿಕೆಟ್‌ ದರ ಏರಿಕೆಯನ್ನು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷರು ಸಮರ್ಥಿಸಿಕೊಳ್ತಿದ್ದಾರೆ. ಶಕ್ತಿಯೋಜನೆ ಬಳಿಕ ಹೊಡೆತ ಬಿದ್ದಿರೋದರಿಂದ ಹಬ್ಬ-ಹರಿದಿನಗಳಲ್ಲಿ ದರ ಏರಿಸದೇ ವಿಧಿಯಿಲ್ಲ.  ಖಾಸಗಿ ಬಸ್‌ಗಳ ಟಿಕೆಟ್‌ ದರ ನಿಗದಿ ಮಾಡುವ ಅಧಿಕಾರ ಸಾರಿಗೆ ಇಲಾಖೆಗೆ ಇಲ್ಲ ಎನ್ನುತ್ತಿದ್ದಾರೆ.

 ಇದನ್ನೂ ವೀಕ್ಷಿಸಿ:  ದಳಪತಿ 'ಲಿಯೋ'ಗೆ ರಜನಿ ಫ್ಯಾನ್ಸ್ ಟಕ್ಕರ್..? ಶಿವಣ್ಣನ 'ಘೋಸ್ಟ್‌' ಬೆನ್ನಿಗೆ ನಿಂತ ತಲೈವಾ ಫ್ಯಾನ್ಸ್!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more