ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಉದ್ಘಾಟನೆ: ಅಂಗಡಿಗಳ ಮೇಲೆ ಭಗವಾಧ್ವಜ ಹಾಕಲು ಕರೆ

ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಉದ್ಘಾಟನೆ: ಅಂಗಡಿಗಳ ಮೇಲೆ ಭಗವಾಧ್ವಜ ಹಾಕಲು ಕರೆ

Published : Sep 13, 2023, 10:57 AM IST

ಕಳೆದ ವರ್ಷ ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ವ್ಯಾಪಾರಿ ಧರ್ಮ ದಂಗಲ್ ಈ ಬಾರಿಯೂ ಮುಂದುವರೆಯುವ ಲಕ್ಷಣಗಳು ಗೋಚರಿಸ್ತಾ ಇದೆ. ಕರಾವಳಿಯಲ್ಲಿ  ಅಧಿಕೃತವಾಗಿ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಬಿಜೆಪಿಯೇ ಹಿಂದೂ ವ್ಯಾಪಾರಿಗಳ ಬೆನ್ನಿಗೆ ನಿಂತಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷರೇ ಹಿಂದೂ ವ್ಯಾಪಾರಿಗಳ ಸಂಘವನ್ನ ಉದ್ಘಾಟಿಸೋ ಮೂಲಕ ಜಾತ್ರಾ ಧರ್ಮ ದಂಗಲ್ ಈ ಬಾರಿಯೂ ಮತ್ತಷ್ಟು ಬಿಸಿಯೇರೋ ಲಕ್ಷಣ ಗೋಚರಿಸಿದೆ.
 

ಕರಾವಳಿಯಲ್ಲಿ ಹುಟ್ಟಿಕೊಂಡಿದ್ದ ಹಿಂದೂ ವ್ಯಾಪಾರ ದಂಗಲ್. ರಾಜ್ಯ ವ್ಯಾಪಿ ಕಿಚ್ಚು ಹಚ್ಚಿತ್ತು. ರಾಜ್ಯಾಧ್ಯಂತ ಧರ್ಮ ಸಂಘರ್ಷಕ್ಕೆ ನಾಂದಿ ಹಾಡಿತ್ತು. ತಣ್ಣಗಿದ್ದ ಧರ್ಮ ದಂಗಲ್ ಮತ್ತೊಮ್ಮೆ ಕರಾವಳಿಯಲ್ಲಿ ಸಿದ್ದು ಮಾಡುವ ಸುಳಿವು ನೀಡಿದೆ. ಯಾಕಂದ್ರೆ ರಾಜ್ಯದ ಹಿಂದೂ ಜಾತ್ರಾ ವ್ಯಾಪಾರಿಗಳ ಪ್ರತ್ಯೇಕ ಸಂಘಕ್ಕೆ(Hindu fair traders association) ಮಂಗಳೂರಲ್ಲಿ(Mangalore) ಬಿಜೆಪಿ ರಾಜ್ಯಾಧ್ಯಕ್ಷರು ಚಾಲನೆ ನೀಡಿದ್ದಾರೆ. ಮಂಗಳೂರಿನಲ್ಲಿ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್( Nalin kumar Kateel) ಚಾಲನೆ ನೀಡಿದ್ರು. ಈ ಮೂಲಕ ಬಹಿರಂಗವಾಗಿಯೇ ದೇವಸ್ಥಾನಗಳಲ್ಲಿ(Temples) ಹಿಂದೂಗಳಷ್ಟೇ ವ್ಯಾಪಾರ ಮಾಡಬೇಕು. ಅನ್ಯ ಧರ್ಮಿಯರಿಗೆ ಅವಕಾಶ ನೀಡಬಾರದು ಎನ್ನುವ ಸಂದೇಶ ನೀಡಿದ್ದಾರೆ. ಹಿಂದೂ ದೇವಸ್ಥಾನಗಳ ಪರಂಪರೆ, ಸಂಸ್ಕೃತಿ ಉಳಿಸುವುದಕ್ಕಾಗಿ ಹಿಂದೂ ವ್ಯಾಪಾರಿಗಳ ಸಂಘಕ್ಕೆ ಚಾಲನೆ ನೀಡಿದ್ದೇವೆ ಎಂದ ನಳಿನ್ ಕುಮಾರ್ ಕಟೀಲ್ , ಹಿಂದೂ ವ್ಯಾಪಾಸ್ಥರ ಸಂಘಟನೆ ಹುಟ್ಟಿಕೊಂಡಿರುವುದು ಒಳ್ಳೆಯ ವಿಷಯ ಎಂದರು. ಸದ್ಯ ರಾಜ್ಯಾದ್ಯಂತ 1 ಲಕ್ಷ 27 ಸಾವಿರ ಹಿಂದೂ ಜಾತ್ರಾ ವ್ಯಾಪಾರಿಗಳ ಗುರುತು ಮಾಡಲಾಗಿದ್ದು, ಸದ್ಯ ರಾಜ್ಯದ ಸಾವಿರಕ್ಕೂ ಅಧಿಕ ಹಿಂದೂ ವ್ಯಾಪಾರಿಗಳನ್ನು ಸೇರಿಸಿ ಸಂಘಟನೆ ರಚಿಸಲಾಗಿದೆ. ಧಾರ್ಮಿಕ ದತ್ತಿ ಅಧಿನಿಯಮ 33ರಡಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲು ಸಂಘಟನೆ ಆಗ್ರಹಿಸಿದೆ. 

ಇದನ್ನೂ ವೀಕ್ಷಿಸಿ:  ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more