ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಉದ್ಘಾಟನೆ: ಅಂಗಡಿಗಳ ಮೇಲೆ ಭಗವಾಧ್ವಜ ಹಾಕಲು ಕರೆ

ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಉದ್ಘಾಟನೆ: ಅಂಗಡಿಗಳ ಮೇಲೆ ಭಗವಾಧ್ವಜ ಹಾಕಲು ಕರೆ

Published : Sep 13, 2023, 10:57 AM IST

ಕಳೆದ ವರ್ಷ ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ವ್ಯಾಪಾರಿ ಧರ್ಮ ದಂಗಲ್ ಈ ಬಾರಿಯೂ ಮುಂದುವರೆಯುವ ಲಕ್ಷಣಗಳು ಗೋಚರಿಸ್ತಾ ಇದೆ. ಕರಾವಳಿಯಲ್ಲಿ  ಅಧಿಕೃತವಾಗಿ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಬಿಜೆಪಿಯೇ ಹಿಂದೂ ವ್ಯಾಪಾರಿಗಳ ಬೆನ್ನಿಗೆ ನಿಂತಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷರೇ ಹಿಂದೂ ವ್ಯಾಪಾರಿಗಳ ಸಂಘವನ್ನ ಉದ್ಘಾಟಿಸೋ ಮೂಲಕ ಜಾತ್ರಾ ಧರ್ಮ ದಂಗಲ್ ಈ ಬಾರಿಯೂ ಮತ್ತಷ್ಟು ಬಿಸಿಯೇರೋ ಲಕ್ಷಣ ಗೋಚರಿಸಿದೆ.
 

ಕರಾವಳಿಯಲ್ಲಿ ಹುಟ್ಟಿಕೊಂಡಿದ್ದ ಹಿಂದೂ ವ್ಯಾಪಾರ ದಂಗಲ್. ರಾಜ್ಯ ವ್ಯಾಪಿ ಕಿಚ್ಚು ಹಚ್ಚಿತ್ತು. ರಾಜ್ಯಾಧ್ಯಂತ ಧರ್ಮ ಸಂಘರ್ಷಕ್ಕೆ ನಾಂದಿ ಹಾಡಿತ್ತು. ತಣ್ಣಗಿದ್ದ ಧರ್ಮ ದಂಗಲ್ ಮತ್ತೊಮ್ಮೆ ಕರಾವಳಿಯಲ್ಲಿ ಸಿದ್ದು ಮಾಡುವ ಸುಳಿವು ನೀಡಿದೆ. ಯಾಕಂದ್ರೆ ರಾಜ್ಯದ ಹಿಂದೂ ಜಾತ್ರಾ ವ್ಯಾಪಾರಿಗಳ ಪ್ರತ್ಯೇಕ ಸಂಘಕ್ಕೆ(Hindu fair traders association) ಮಂಗಳೂರಲ್ಲಿ(Mangalore) ಬಿಜೆಪಿ ರಾಜ್ಯಾಧ್ಯಕ್ಷರು ಚಾಲನೆ ನೀಡಿದ್ದಾರೆ. ಮಂಗಳೂರಿನಲ್ಲಿ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್( Nalin kumar Kateel) ಚಾಲನೆ ನೀಡಿದ್ರು. ಈ ಮೂಲಕ ಬಹಿರಂಗವಾಗಿಯೇ ದೇವಸ್ಥಾನಗಳಲ್ಲಿ(Temples) ಹಿಂದೂಗಳಷ್ಟೇ ವ್ಯಾಪಾರ ಮಾಡಬೇಕು. ಅನ್ಯ ಧರ್ಮಿಯರಿಗೆ ಅವಕಾಶ ನೀಡಬಾರದು ಎನ್ನುವ ಸಂದೇಶ ನೀಡಿದ್ದಾರೆ. ಹಿಂದೂ ದೇವಸ್ಥಾನಗಳ ಪರಂಪರೆ, ಸಂಸ್ಕೃತಿ ಉಳಿಸುವುದಕ್ಕಾಗಿ ಹಿಂದೂ ವ್ಯಾಪಾರಿಗಳ ಸಂಘಕ್ಕೆ ಚಾಲನೆ ನೀಡಿದ್ದೇವೆ ಎಂದ ನಳಿನ್ ಕುಮಾರ್ ಕಟೀಲ್ , ಹಿಂದೂ ವ್ಯಾಪಾಸ್ಥರ ಸಂಘಟನೆ ಹುಟ್ಟಿಕೊಂಡಿರುವುದು ಒಳ್ಳೆಯ ವಿಷಯ ಎಂದರು. ಸದ್ಯ ರಾಜ್ಯಾದ್ಯಂತ 1 ಲಕ್ಷ 27 ಸಾವಿರ ಹಿಂದೂ ಜಾತ್ರಾ ವ್ಯಾಪಾರಿಗಳ ಗುರುತು ಮಾಡಲಾಗಿದ್ದು, ಸದ್ಯ ರಾಜ್ಯದ ಸಾವಿರಕ್ಕೂ ಅಧಿಕ ಹಿಂದೂ ವ್ಯಾಪಾರಿಗಳನ್ನು ಸೇರಿಸಿ ಸಂಘಟನೆ ರಚಿಸಲಾಗಿದೆ. ಧಾರ್ಮಿಕ ದತ್ತಿ ಅಧಿನಿಯಮ 33ರಡಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲು ಸಂಘಟನೆ ಆಗ್ರಹಿಸಿದೆ. 

ಇದನ್ನೂ ವೀಕ್ಷಿಸಿ:  ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more