ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಉದ್ಘಾಟನೆ: ಅಂಗಡಿಗಳ ಮೇಲೆ ಭಗವಾಧ್ವಜ ಹಾಕಲು ಕರೆ

ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಉದ್ಘಾಟನೆ: ಅಂಗಡಿಗಳ ಮೇಲೆ ಭಗವಾಧ್ವಜ ಹಾಕಲು ಕರೆ

Published : Sep 13, 2023, 10:57 AM IST

ಕಳೆದ ವರ್ಷ ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ವ್ಯಾಪಾರಿ ಧರ್ಮ ದಂಗಲ್ ಈ ಬಾರಿಯೂ ಮುಂದುವರೆಯುವ ಲಕ್ಷಣಗಳು ಗೋಚರಿಸ್ತಾ ಇದೆ. ಕರಾವಳಿಯಲ್ಲಿ  ಅಧಿಕೃತವಾಗಿ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಬಿಜೆಪಿಯೇ ಹಿಂದೂ ವ್ಯಾಪಾರಿಗಳ ಬೆನ್ನಿಗೆ ನಿಂತಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷರೇ ಹಿಂದೂ ವ್ಯಾಪಾರಿಗಳ ಸಂಘವನ್ನ ಉದ್ಘಾಟಿಸೋ ಮೂಲಕ ಜಾತ್ರಾ ಧರ್ಮ ದಂಗಲ್ ಈ ಬಾರಿಯೂ ಮತ್ತಷ್ಟು ಬಿಸಿಯೇರೋ ಲಕ್ಷಣ ಗೋಚರಿಸಿದೆ.
 

ಕರಾವಳಿಯಲ್ಲಿ ಹುಟ್ಟಿಕೊಂಡಿದ್ದ ಹಿಂದೂ ವ್ಯಾಪಾರ ದಂಗಲ್. ರಾಜ್ಯ ವ್ಯಾಪಿ ಕಿಚ್ಚು ಹಚ್ಚಿತ್ತು. ರಾಜ್ಯಾಧ್ಯಂತ ಧರ್ಮ ಸಂಘರ್ಷಕ್ಕೆ ನಾಂದಿ ಹಾಡಿತ್ತು. ತಣ್ಣಗಿದ್ದ ಧರ್ಮ ದಂಗಲ್ ಮತ್ತೊಮ್ಮೆ ಕರಾವಳಿಯಲ್ಲಿ ಸಿದ್ದು ಮಾಡುವ ಸುಳಿವು ನೀಡಿದೆ. ಯಾಕಂದ್ರೆ ರಾಜ್ಯದ ಹಿಂದೂ ಜಾತ್ರಾ ವ್ಯಾಪಾರಿಗಳ ಪ್ರತ್ಯೇಕ ಸಂಘಕ್ಕೆ(Hindu fair traders association) ಮಂಗಳೂರಲ್ಲಿ(Mangalore) ಬಿಜೆಪಿ ರಾಜ್ಯಾಧ್ಯಕ್ಷರು ಚಾಲನೆ ನೀಡಿದ್ದಾರೆ. ಮಂಗಳೂರಿನಲ್ಲಿ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಿಗಳ ಸಂಘಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್( Nalin kumar Kateel) ಚಾಲನೆ ನೀಡಿದ್ರು. ಈ ಮೂಲಕ ಬಹಿರಂಗವಾಗಿಯೇ ದೇವಸ್ಥಾನಗಳಲ್ಲಿ(Temples) ಹಿಂದೂಗಳಷ್ಟೇ ವ್ಯಾಪಾರ ಮಾಡಬೇಕು. ಅನ್ಯ ಧರ್ಮಿಯರಿಗೆ ಅವಕಾಶ ನೀಡಬಾರದು ಎನ್ನುವ ಸಂದೇಶ ನೀಡಿದ್ದಾರೆ. ಹಿಂದೂ ದೇವಸ್ಥಾನಗಳ ಪರಂಪರೆ, ಸಂಸ್ಕೃತಿ ಉಳಿಸುವುದಕ್ಕಾಗಿ ಹಿಂದೂ ವ್ಯಾಪಾರಿಗಳ ಸಂಘಕ್ಕೆ ಚಾಲನೆ ನೀಡಿದ್ದೇವೆ ಎಂದ ನಳಿನ್ ಕುಮಾರ್ ಕಟೀಲ್ , ಹಿಂದೂ ವ್ಯಾಪಾಸ್ಥರ ಸಂಘಟನೆ ಹುಟ್ಟಿಕೊಂಡಿರುವುದು ಒಳ್ಳೆಯ ವಿಷಯ ಎಂದರು. ಸದ್ಯ ರಾಜ್ಯಾದ್ಯಂತ 1 ಲಕ್ಷ 27 ಸಾವಿರ ಹಿಂದೂ ಜಾತ್ರಾ ವ್ಯಾಪಾರಿಗಳ ಗುರುತು ಮಾಡಲಾಗಿದ್ದು, ಸದ್ಯ ರಾಜ್ಯದ ಸಾವಿರಕ್ಕೂ ಅಧಿಕ ಹಿಂದೂ ವ್ಯಾಪಾರಿಗಳನ್ನು ಸೇರಿಸಿ ಸಂಘಟನೆ ರಚಿಸಲಾಗಿದೆ. ಧಾರ್ಮಿಕ ದತ್ತಿ ಅಧಿನಿಯಮ 33ರಡಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲು ಸಂಘಟನೆ ಆಗ್ರಹಿಸಿದೆ. 

ಇದನ್ನೂ ವೀಕ್ಷಿಸಿ:  ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more