ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

Published : Nov 07, 2022, 06:07 PM IST

ನಿಪ್ಪಾಣಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದು ಅನ್ನೋದು ಪರ್ಷಿಯನ್‌ ಭಾಷೆಯ ಪದ. ಭಾರತಕ್ಕೂ ಇರಾನ್‌ಗೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ.
 

ಚಿಕ್ಕೋಡಿ (ನ.7): ಹಿಂದೂ ಎನ್ನುವ ಶಬ್ದ ನಿಮ್ಮದಲ್ಲ. ಅದು ಪರ್ಷಿಯಾದಿಂದ ಬಂದಿದ್ದು. ಹಾಗೇನಾದರೂ ಹಿಂದು ಪದದ ಶಬ್ದ ಅರ್ಥವೇನಾದರೂ ತಿಳಿದರೇ ನೀವೇ ನಾಚಿಕೆಯಿಂದ ತಲೆ ತಗ್ಗಿಸ್ತೀರಾ. ಹಿಂದು ಎನ್ನುವ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಇದು ನಾನು ಹೇಳುತ್ತಿರೋದಲ್ಲ. ಈಗಾಗಲೇ ಸ್ವಾಮೀಜಿ ಕೂಡ ಹೇಳಿದ್ದಾರೆ. ಅದು ವೆಬ್‌ಸೈಟ್‌ಗಳಲ್ಲಿ ಕೂಡ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮಾತು ವಿವಾದಕ್ಕೆ ಕಾರಣವಾಗಿದೆ.

ಹಿಂದು ಎನ್ನುವ ಪದ ಬಂದಿದ್ದಯ ಎಲ್ಲಿಂದ? ಇದು ಪರ್ಷಿಯಾದಿಂದ ಬಂದಿದ್ದು. ಅದಕ್ಕೂ ಭಾರತಕ್ಕೂ ಏನು ಸಂಬಂಧ? ಹಿಂದು ಎನ್ನುವುದು ನಿಮ್ಮದಾಗಿದ್ದು ಹೇಗೆ? ವಾಟ್ಸಾಪ್‌, ವಿಕಿಪೀಡಿಯಾ ಚೆಕ್‌ ಮಾಡಿ. ಹಿಂದು ಎನ್ನುವ ಪದ ನಿಮ್ಮದಲ್ಲ. ಹಾಗಿದ್ದಾಗ ಆ ಪದವನ್ನು ನೀವು ಇಷ್ಟು ಎತ್ತರದಲ್ಲಿ ಇಟ್ಟಿದ್ದೇಕೆ. ಇದರ ಅರ್ಥವೇ ಅಷ್ಟು ಕೆಟ್ಟದಾಗಿದೆ ಎಂದು ಅವರು ಹೇಳಿದ್ದಾರೆ.

"ಬಂಧುತ್ವ ಇಲ್ಲದ ಹಿಂದುತ್ವ ದೇಶಕ್ಕೆ ಅಪಾಯಕಾರಿ": ಜ್ಞಾನಪ್ರಕಾಶ ಸ್ವಾಮೀಜಿಯಿಂದ ಟೀಕೆ

ಶಿವಾಜಿ ಮಹಾರಾಜರ ಇತಿಹಾಸವನ್ನ ಮುಚ್ಚಿಡಲಾಗಿತ್ತು. ಯಾಕೆ ಇತಿಹಾಸವನ್ನ ಮುಚ್ಚಿಡಲಾಗಿತ್ತು ಅನ್ನೋದು ಚರ್ಚೆ ಆಗಿಲ್ಲ. ಮಹಾತ್ಮ ಫುಲೆ ಇಲ್ಲದಿದ್ದರೆ, ಇತಿಹಾಸ ಹೊರ ಬರುತ್ತಿರಲಿಲ್ಲ ಇತಿಹಾಸವನ್ನ ಮುಚ್ಚಿಡಲಾಗಿತ್ತು ಅದರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಶಿವಾಜಿ ಮಹಾರಾಜರಿಗೆ ಯುದ್ದದ ವೇಳೆ ಹಿಂದು, ಮರಾಠರು ಮಾತ್ರ ಸಲಹೆ ನೀಡಿಲ್ಲ ಮುಸ್ಲಿಮರು ಸಲಹೆ ನೀಡಿದ್ದರು ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more