7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

Published : Jun 18, 2022, 10:57 AM ISTUpdated : Jun 18, 2022, 11:29 AM IST

‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. 

ಬೆಂಗಳೂರು (ಜೂ, 18): ‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ವೇಷ ಧರಿಸಿ ಊರೂರು ಸುತ್ತಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ, ನಮ್ಮೂರಿನ ಅದ್ಭುತಗಳ ಬಗ್ಗೆ ಜಗತ್ತಿಗೆ ತಿಳಿಸೋಣ ಎಂದು ಪ್ರಚಾರ ಮಾಡುತ್ತಿದ್ದಾರೆ. 

ಮೂಲತಃ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಮುತ್ತಣ್ಣ ಕಲಿತಿರುವುದು ಬರೀ 7ನೇ ತರಗತಿ. ಜೀವನ ನಿರ್ವಹಣೆಗೆಂದು ಕರ್ಕಿಕಟ್ಟಿಗ್ರಾಮಕ್ಕೆ ಹೋಗಿ ನೆಲೆಸಿದ್ದಾರೆ. ಕರ್ಕಿಕಟ್ಟಿಯಲ್ಲಿ ಚಿಕ್ಕದೊಂದು ಹೋಟೆಲ್‌ ಹೊಂದಿದ್ದಾರೆ. ಕನ್ನಡ ಭಾಷೆ, ಸಾಹಿತಿಗಳ ಬಗ್ಗೆ ವಿಶೇಷ ಆಸ್ತೆಯನ್ನು ಹೊಂದಿರುವ ಇವರು, ತಮ್ಮ ಹೋಟೆಲ್‌ನ ಗೋಡೆಗಳ ಮೇಲೆ ಸ್ವಾತಂತ್ರ್ಯ ಹೋರಾಟಗಾರರದ್ದು, ಸಾಹಿತಿಗಳ ಭಾವಚಿತ್ರ, ಅವರ ಪದ್ಯಗಳನ್ನು ಬರೆದು ಅಂಟಿಸಿರುವುದುಂಟು.

2015ರಿಂದಲೇ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದವರಲ್ಲಿ ಇವರೂ ಒಬ್ಬರು. ಪರಿಸರ ಜಾಗೃತಿ, ಮದ್ಯವ್ಯಸನ ಮುಕ್ತ ಸಮಾಜ, ಭ್ರಷ್ಟಾಚಾರ ರಹಿತ ಆಡಳಿತ ಇವರ ಹೋರಾಟದ ವಿಷಯಗಳು. ಇದಕ್ಕಾಗಿ ಇವರು ಆಗಾಗ ಜಾಗೃತಿ ಜಾಥಾ ನಡೆಸುತ್ತಲೇ ಇರುತ್ತಾರೆ.
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more