7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

Published : Jun 18, 2022, 10:57 AM ISTUpdated : Jun 18, 2022, 11:29 AM IST

‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. 

ಬೆಂಗಳೂರು (ಜೂ, 18): ‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ವೇಷ ಧರಿಸಿ ಊರೂರು ಸುತ್ತಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ, ನಮ್ಮೂರಿನ ಅದ್ಭುತಗಳ ಬಗ್ಗೆ ಜಗತ್ತಿಗೆ ತಿಳಿಸೋಣ ಎಂದು ಪ್ರಚಾರ ಮಾಡುತ್ತಿದ್ದಾರೆ. 

ಮೂಲತಃ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಮುತ್ತಣ್ಣ ಕಲಿತಿರುವುದು ಬರೀ 7ನೇ ತರಗತಿ. ಜೀವನ ನಿರ್ವಹಣೆಗೆಂದು ಕರ್ಕಿಕಟ್ಟಿಗ್ರಾಮಕ್ಕೆ ಹೋಗಿ ನೆಲೆಸಿದ್ದಾರೆ. ಕರ್ಕಿಕಟ್ಟಿಯಲ್ಲಿ ಚಿಕ್ಕದೊಂದು ಹೋಟೆಲ್‌ ಹೊಂದಿದ್ದಾರೆ. ಕನ್ನಡ ಭಾಷೆ, ಸಾಹಿತಿಗಳ ಬಗ್ಗೆ ವಿಶೇಷ ಆಸ್ತೆಯನ್ನು ಹೊಂದಿರುವ ಇವರು, ತಮ್ಮ ಹೋಟೆಲ್‌ನ ಗೋಡೆಗಳ ಮೇಲೆ ಸ್ವಾತಂತ್ರ್ಯ ಹೋರಾಟಗಾರರದ್ದು, ಸಾಹಿತಿಗಳ ಭಾವಚಿತ್ರ, ಅವರ ಪದ್ಯಗಳನ್ನು ಬರೆದು ಅಂಟಿಸಿರುವುದುಂಟು.

2015ರಿಂದಲೇ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದವರಲ್ಲಿ ಇವರೂ ಒಬ್ಬರು. ಪರಿಸರ ಜಾಗೃತಿ, ಮದ್ಯವ್ಯಸನ ಮುಕ್ತ ಸಮಾಜ, ಭ್ರಷ್ಟಾಚಾರ ರಹಿತ ಆಡಳಿತ ಇವರ ಹೋರಾಟದ ವಿಷಯಗಳು. ಇದಕ್ಕಾಗಿ ಇವರು ಆಗಾಗ ಜಾಗೃತಿ ಜಾಥಾ ನಡೆಸುತ್ತಲೇ ಇರುತ್ತಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more