7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

7 Wonders Of Karnataka: 7 ಅದ್ಭುತಗಳು ಅಭಿಯಾನಕ್ಕೆ ‘ಗಾಂಧೀಜಿ’ ಸಾಥ್‌!

Published : Jun 18, 2022, 10:57 AM ISTUpdated : Jun 18, 2022, 11:29 AM IST

‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. 

ಬೆಂಗಳೂರು (ಜೂ, 18): ‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ನ ‘ಕರ್ನಾಟಕದ ಏಳು ಅದ್ಭುತಗಳು’ ಅಭಿಯಾನಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಕರ್ಕಿಕಟ್ಟಿಗ್ರಾಮದ ಮುತ್ತಣ್ಣ ಚನ್ನಬಸಪ್ಪ ತಿರ್ಲಾಪುರ (53) ವಿಭಿನ್ನವಾಗಿ ಸಾಥ್‌ ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ವೇಷ ಧರಿಸಿ ಊರೂರು ಸುತ್ತಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ, ನಮ್ಮೂರಿನ ಅದ್ಭುತಗಳ ಬಗ್ಗೆ ಜಗತ್ತಿಗೆ ತಿಳಿಸೋಣ ಎಂದು ಪ್ರಚಾರ ಮಾಡುತ್ತಿದ್ದಾರೆ. 

ಮೂಲತಃ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಮುತ್ತಣ್ಣ ಕಲಿತಿರುವುದು ಬರೀ 7ನೇ ತರಗತಿ. ಜೀವನ ನಿರ್ವಹಣೆಗೆಂದು ಕರ್ಕಿಕಟ್ಟಿಗ್ರಾಮಕ್ಕೆ ಹೋಗಿ ನೆಲೆಸಿದ್ದಾರೆ. ಕರ್ಕಿಕಟ್ಟಿಯಲ್ಲಿ ಚಿಕ್ಕದೊಂದು ಹೋಟೆಲ್‌ ಹೊಂದಿದ್ದಾರೆ. ಕನ್ನಡ ಭಾಷೆ, ಸಾಹಿತಿಗಳ ಬಗ್ಗೆ ವಿಶೇಷ ಆಸ್ತೆಯನ್ನು ಹೊಂದಿರುವ ಇವರು, ತಮ್ಮ ಹೋಟೆಲ್‌ನ ಗೋಡೆಗಳ ಮೇಲೆ ಸ್ವಾತಂತ್ರ್ಯ ಹೋರಾಟಗಾರರದ್ದು, ಸಾಹಿತಿಗಳ ಭಾವಚಿತ್ರ, ಅವರ ಪದ್ಯಗಳನ್ನು ಬರೆದು ಅಂಟಿಸಿರುವುದುಂಟು.

2015ರಿಂದಲೇ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದವರಲ್ಲಿ ಇವರೂ ಒಬ್ಬರು. ಪರಿಸರ ಜಾಗೃತಿ, ಮದ್ಯವ್ಯಸನ ಮುಕ್ತ ಸಮಾಜ, ಭ್ರಷ್ಟಾಚಾರ ರಹಿತ ಆಡಳಿತ ಇವರ ಹೋರಾಟದ ವಿಷಯಗಳು. ಇದಕ್ಕಾಗಿ ಇವರು ಆಗಾಗ ಜಾಗೃತಿ ಜಾಥಾ ನಡೆಸುತ್ತಲೇ ಇರುತ್ತಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more