ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

Published : Apr 17, 2022, 01:59 PM IST

ವಿವಾದಿತ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ (Hubballi Riot)ಮುಸ್ಲಿಮರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 'ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬೇಡಿ, ಸರ್ಕಾರ ಇದನ್ನು ಸಹಿಸುವುದಿಲ್ಲ' ಎಂದು ಹೊಸಪೇಟೆಯಲ್ಲಿ (Hosapete) ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಹುಬ್ಬಳ್ಳಿ (E. 17): ವಿವಾದಿತ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ (Hubballi Riot)ಮುಸ್ಲಿಮರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 'ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬೇಡಿ, ಸರ್ಕಾರ ಇದನ್ನು ಸಹಿಸುವುದಿಲ್ಲ. ಸರ್ಕಾರ ಈ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಗಲಾಟೆಗೆ ಪ್ರಚೋದನೆ ಕೊಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೊಸಪೇಟೆಯಲ್ಲಿ (Hosapete) ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ವಿವಾದಾತ್ಮಕ ಪೋಸ್ಟ್‌ ಮಾಡಿದ ಯುವಕನನ್ನು ಬಂಧಿಸಿದ್ದೇವೆ. ಎಫ್‌ಐಆರ್‌ (FIR) ಆಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಮಾತಿಗೆ ಕಿವಿಗೊಡದೆ ಪ್ರತಿಭಟನಕಾರರು ಪುಂಡಾಟ ಮೆರೆದರು. ರಸ್ತೆ ಮೇಲೆ ಕಲ್ಲುಗಳ ರಾಶಿ ಹರಡಿತ್ತು. ಬಸ್‌, ಬೈಕು, ಪೊಲೀಸ್‌ ಜೀಪುಗಳ ಮೇಲೆ ಕಲ್ಲೆಸೆದರು. ಪುಂಡಾಟ ಮೆರೆದವರ ಮೇಲೆ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ತಕ್ಷಣ ದುಷ್ಕರ್ಮಿಗಳ ಬೈಕು ಸೇರಿ ಇನ್ನಿತರೆ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾದರು. ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಹಿಂಬಾಗಕ್ಕೆ ಜಮಾಯಿಸಿದ ಪ್ರತಿಭಟನಕಾರರು ಆಗಾಗ ಮುಂದುವರಿದು ಬರುವುದು ಘೋಷಣೆ ಕೂಗುವುದು ಮಾಡುತ್ತಲೆ ಇದ್ದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more