ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

Published : Apr 17, 2022, 01:59 PM IST

ವಿವಾದಿತ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ (Hubballi Riot)ಮುಸ್ಲಿಮರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 'ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬೇಡಿ, ಸರ್ಕಾರ ಇದನ್ನು ಸಹಿಸುವುದಿಲ್ಲ' ಎಂದು ಹೊಸಪೇಟೆಯಲ್ಲಿ (Hosapete) ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಹುಬ್ಬಳ್ಳಿ (E. 17): ವಿವಾದಿತ ಪೋಸ್ಟ್‌ನಿಂದ ಹುಬ್ಬಳ್ಳಿಯಲ್ಲಿ (Hubballi Riot)ಮುಸ್ಲಿಮರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 'ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬೇಡಿ, ಸರ್ಕಾರ ಇದನ್ನು ಸಹಿಸುವುದಿಲ್ಲ. ಸರ್ಕಾರ ಈ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಗಲಾಟೆಗೆ ಪ್ರಚೋದನೆ ಕೊಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೊಸಪೇಟೆಯಲ್ಲಿ (Hosapete) ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ವಿವಾದಾತ್ಮಕ ಪೋಸ್ಟ್‌ ಮಾಡಿದ ಯುವಕನನ್ನು ಬಂಧಿಸಿದ್ದೇವೆ. ಎಫ್‌ಐಆರ್‌ (FIR) ಆಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಮಾತಿಗೆ ಕಿವಿಗೊಡದೆ ಪ್ರತಿಭಟನಕಾರರು ಪುಂಡಾಟ ಮೆರೆದರು. ರಸ್ತೆ ಮೇಲೆ ಕಲ್ಲುಗಳ ರಾಶಿ ಹರಡಿತ್ತು. ಬಸ್‌, ಬೈಕು, ಪೊಲೀಸ್‌ ಜೀಪುಗಳ ಮೇಲೆ ಕಲ್ಲೆಸೆದರು. ಪುಂಡಾಟ ಮೆರೆದವರ ಮೇಲೆ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ತಕ್ಷಣ ದುಷ್ಕರ್ಮಿಗಳ ಬೈಕು ಸೇರಿ ಇನ್ನಿತರೆ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾದರು. ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಹಿಂಬಾಗಕ್ಕೆ ಜಮಾಯಿಸಿದ ಪ್ರತಿಭಟನಕಾರರು ಆಗಾಗ ಮುಂದುವರಿದು ಬರುವುದು ಘೋಷಣೆ ಕೂಗುವುದು ಮಾಡುತ್ತಲೆ ಇದ್ದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more