ನಾನು ಯಾರ ಜೊತೆ ವ್ಯವಹಾರ ಮಾಡ್ಬೇಕು ಗೊತ್ತಿದೆ; ಖಾದರ್ ಗೆ ಶಾಸಕ ಕಾಮತ್ ತಿರುಗೇಟು

ನಾನು ಯಾರ ಜೊತೆ ವ್ಯವಹಾರ ಮಾಡ್ಬೇಕು ಗೊತ್ತಿದೆ; ಖಾದರ್ ಗೆ ಶಾಸಕ ಕಾಮತ್ ತಿರುಗೇಟು

Published : Mar 27, 2022, 11:39 AM IST

ಮಂಗಳೂರಿನ (Mangaluru) ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಅಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ (YT Khadar) ಆರೋಪಕ್ಕೆ ‌ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ತಿರುಗೇಟು ಕೊಟ್ಟಿದ್ದಾರೆ.

ಮಂಗಳೂರು (ಮಾ. 27): ಮಂಗಳೂರಿನ (Mangaluru) ಬಿಜೆಪಿ ಶಾಸಕರುಗಳ ಗುತ್ತಿಗೆದಾರರೆಲ್ಲಾ ಮುಸ್ಲಿಮರೇ. ಆದರೆ ರಾಜಕೀಯಕ್ಕಾಗಿ ಮುಸ್ಲಿಮರನ್ನ ವಿರೋಧಿಸ್ತಾರೆ ಅಂದಿದ್ದ ವಿಧಾನಸಭೆ ವಿಪಕ್ಷ ನಾಯಕ ಯು.ಟಿ.ಖಾದರ್ (YT Khadar) ಆರೋಪಕ್ಕೆ ‌ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ (Vedavyasa Kamat) ತಿರುಗೇಟು ಕೊಟ್ಟಿದ್ದಾರೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದದ್ದಾರೆ.

ಸರ್ಕಾರದ ಕೆಲಸ, ಗುತ್ತಿಗೆಗಳನ್ನ ನೀಡಲು ಅದರದ್ದೇ ಆದ ಕಾನೂನುಗಳಿವೆ. ಮಂತ್ರಿಯಾಗಿ ಕೆಲಸ ಮಾಡಿದ ಖಾದರ್ ಗೆ ಸಾಮಾನ್ಯ ಜ್ಞಾನ ಬೇಕು.‌ ಮಂಗಳೂರು ಪಾಲಿಕೆಯಲ್ಲಿ 5 ಲಕ್ಷ ಮೇಲ್ಪಟ್ಟ ಎಲ್ಲಾ ಕಾಮಗಾರಿ ಇ-ಟೆಂಡರ್ ಮುಖಾಂತರ ಆಗುತ್ತದೆ.‌ ಮೂಡಾ ಮತ್ತು ಪಿಡಬ್ಲ್ಯುಡಿ ಎಲ್ಲಾ ಕಾಮಗಾರಿ ಇ-ಟೆಂಡರ್ ಆಗುತ್ತದೆ. ಇದರಲ್ಲಿ ಅರ್ಹತೆ ಇದ್ದವರಿಗೆ ಈ ಕಾಮಗಾರಿ ಗುತ್ತಿಗೆ ಅವರಿಗೆ ಸಿಗುತ್ತದೆ ಎಂದು ಖಾದರ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. 

ನಾನು‌ ಆರೇಳು ವರ್ಷದ ಹಿಂದೆ ವಿದೇಶ ಪ್ರವಾಸ ಮಾಡಿದಾಗ ನನಗೆ ಶುಭ ಕೋರಿ ಮುಸ್ಲಿಂ ಉದ್ಯಮಿ ಸ್ನೇಹಿತರು ಜಾಹೀರಾತು ಹಾಕಿದ್ದರು. ದುಬೈ ದೇಶದ ಎಲ್ಲಾ ಕಂಪೆನಿ ಯಾರದ್ದು? ಅಲ್ಲಿಗೆ ಉದ್ಯಮಕ್ಕೆ ನಾನು ಹೋಗಬೇಕು. ಒಬ್ಬ ರಫ್ತುಧಾರನಾಗಿ ಅಲ್ಲಿಗೆ ಹೋಗುವಾಗ ಅಲ್ಲಿನ ವ್ಯವಸ್ಥೆ ನನಗೆ ಅಗತ್ಯ. 40-50 ದೇಶಗಳಿಗೆ ರಫ್ತು ಮತ್ತು ಆಮದು ಮಾಡುವಾಗ ಅಲ್ಲಿನ ವ್ಯವಹಾರಿಕ ವ್ಯವಸ್ಥೆಯನ್ನು ನಾನು ಅನುಸರಿಸಬೇಕು. ನಾನು ಯಾರ ಜೊತೆ ವ್ಯವಹಾರ ಮಾಡಬೇಕು ಅಂತ ಗೊತ್ತಿದೆ ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more