ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published : Dec 21, 2024, 07:31 PM ISTUpdated : Dec 21, 2024, 07:33 PM IST

ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಂಗಳೂರು (ಡಿ.21): ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿ ಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದ‌ಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಅನ್ನು ಆಯೋಜಿಸಿದೆ. ಪ್ರತಿಯೊಬ್ಬರಿಗೆ ತಲಾ 4,500 ರೂ.ಗೆ 6 ರಿಂದ 7 ನಿಮಿಷಗಳ ಹೆಲಿಕಾಪ್ಟರ್ ಪ್ರಯಾಣ ಅನುಭವ ಸಿಗಲಿದೆ.  ತುಂಬಿ ಏರ್ ಟ್ಯಾಕ್ಸ್ ಕಂಪನಿ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ ಅಯೋಜನೆ ಮಾಡಲಾಗಿದ್ದು, ಮಂಗಳೂರಿನ ಪಣಂಬೂರು, ಕೊಟ್ಟಾರ, ಲಾಲ್ ಭಾಗ್, ನೇತ್ರಾವತಿ ನದಿ ಹಾಗೂ ಸಮುದ್ರ ತೀರದಲ್ಲಿ ರೌಂಡ್ಸ್ ನಡೆಯಲಿದೆ. Www.helitaxii.com ಮೂಲಕವೂ ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತೀ ಟ್ರಿಪ್ ನಲ್ಲಿ ಅರು ಜನರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more