ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಈ ಬಾರಿ ಹೆಲಿ ಟೂರಿಸಂ ಯಶಸ್ವಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರ ಟೂರಿಸಂಗೆ ಚಿಂತನೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Published : Dec 21, 2024, 07:31 PM ISTUpdated : Dec 21, 2024, 07:33 PM IST

ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಮಂಗಳೂರು (ಡಿ.21): ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿ ಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದ‌ಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಅನ್ನು ಆಯೋಜಿಸಿದೆ. ಪ್ರತಿಯೊಬ್ಬರಿಗೆ ತಲಾ 4,500 ರೂ.ಗೆ 6 ರಿಂದ 7 ನಿಮಿಷಗಳ ಹೆಲಿಕಾಪ್ಟರ್ ಪ್ರಯಾಣ ಅನುಭವ ಸಿಗಲಿದೆ.  ತುಂಬಿ ಏರ್ ಟ್ಯಾಕ್ಸ್ ಕಂಪನಿ ಸಹಯೋಗದೊಂದಿಗೆ ದ.ಕ ಜಿಲ್ಲಾಡಳಿತ ಅಯೋಜನೆ ಮಾಡಲಾಗಿದ್ದು, ಮಂಗಳೂರಿನ ಪಣಂಬೂರು, ಕೊಟ್ಟಾರ, ಲಾಲ್ ಭಾಗ್, ನೇತ್ರಾವತಿ ನದಿ ಹಾಗೂ ಸಮುದ್ರ ತೀರದಲ್ಲಿ ರೌಂಡ್ಸ್ ನಡೆಯಲಿದೆ. Www.helitaxii.com ಮೂಲಕವೂ ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರತೀ ಟ್ರಿಪ್ ನಲ್ಲಿ ಅರು ಜನರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಈ ಬಾರಿ ಹೆಲಿ ಟೂರಿಸಂ ಯಶಸ್ಸಿಯಾದ್ರೆ ಮುಂದೆ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ, ಕೊಲ್ಲೂರು ಭಾಗಕ್ಕೆ ಮಂಗಳೂರಿನಿಂದ ಟೂರಿಸಂಗೆ ಚಿಂತನೆ ಮಾಡಬಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more