ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

Published : Dec 18, 2024, 05:14 PM IST

ಬಾಗಲಕೋಟೆಯಲ್ಲಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರ ಬಂಧನ. CEN ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳಿಂದ 127 ಶಾಲೆಗಳಿಗೆ ನೋಟಿಸ್ ಜಾರಿ.

ಅಕ್ರಮವಾಗಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು (Milk Powder) ಸಂಗ್ರಹಿಸಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸಲು ಯತ್ನಿಸುತ್ತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆಯಲ್ಲಿ CEN ಪೊಲೀಸರ ಭರ್ಜರಿ ಕಾರ್ಯಾಚರಣೆ  ನಡೆಸಿದ್ದು, ತನಿಖೆ ವೇಳೆ  ಆರೋಪಿ ಸತ್ಯ ಬಾಯಿ ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಆತಂಕ ಶುರುವಾಗಿದೆ. 127 ಸರ್ಕಾರಿ ಶಾಲೆಗಳಿಗೆ CEN ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಶ್ರೀಶೈಲದಿಂ ಸಬ್ ಲೀಜ್ ಪಡೆದು ಸಿದ್ದಪ್ಪನಿಂದ ಗೋಲ್​ಮಾಲ್ ನಡೆಸಿದ್ದು, ಅ.4ರಂದು ಸೂಳಿಕೇರಿ ಗ್ರಾಮದಲ್ಲಿ ನಡೆದಿದ್ದ CEN ಪೋಲಿಸರ ದಾಳಿ 
ಆರೋಪಿ ಸಿದ್ದಪ್ಪ ಸೇರಿ ಮೂವರ ವಿರುದ್ಧ FIR ದಾಖಲು ಮಾಡಲಾಗಿದೆ.

ರಾತ್ರಿ ಹಾಲಿನ ಪೌಡರ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಸಾಗಿಸಲು ಪ್ಲಾನ್​ ನಡೆದಿತ್ತು. ಈಗ ಗೂಡ್ಸ್  ವಾಹನ ಸಹಿತ ಸಿದ್ದಪ್ಪನ ಹೆಡೆಮುರಿ ಕಟ್ಟಿದ್ದ ಪೊಲೀಸರಿಗೆ 127 ಶಾಲೆಗಳಿಂದ ಕ್ಷೀರಭಾಗ್ಯ ಹಾಲಿನ ಪೌಡರ್ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾನೆ.

ಈ ಹಿನ್ನೆಲೆಯಲ್ಲಿ ಹುನಗುಂದ, ಬಾದಾಮಿ, ಬೀಳಗಿ ತಾಲೂಕಿನ ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಜಾರಿ ಹಿನ್ನಲೆ ಈಗಾಗಲೇ ವಿಚಾರಣೆಗೆ 27 ಜನರು ಹಾಜರಾಗಿದ್ದು, ಒಂದು ನೂರಕ್ಕೂ ಅಧಿಕ ಶಾಲೆಗಳಿಂದ ಇನ್ನು ವಿಚಾರಣೆ ಹಾಜರಾಗಿಲ್ಲ.

ಒಂದು ಶಾಲೆಗೆ 25 ಪ್ಯಾಕೇಟ್ ಪೈಕಿ 15 ಪ್ಯಾಕೇಟ್ ನೀಡುತ್ತಿದ್ದ ಸಿದ್ದಪ್ಪ. 10 ಪಾಕೆಟ್​ಗಳಿಗೆ 100 ರೂ. ನೀಡಿ ಪಡೆಯುತ್ತಿದ್ದೆ ಎಂದಿರೋ ಆರೋಪಿ. ಒಟ್ಟು 4,475 ಕೆಜಿ ಹಾಲಿ ಪೌಡರ್ ಸಂಗ್ರಹಿಸಿದ್ದ ಆರೋಪಿ ಸಿದ್ದಪ್ಪ. ಒಟ್ಟು 18 ಲಕ್ಷ ಪದಾರ್ಥ ವಶಕ್ಕೆ ಪಡೆದ ಸಿಇಎನ್ ಠಾಣೆ ಪೊಲೀಸರು. ಬಾಗಲಕೋಟೆ ಸಿಇಎನ್ ಠಾಣೆ ಪೋಲಿಸರಿಂದ ತನಿಖೆ ಮುಂದುವರೆದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more