ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

Published : Dec 18, 2024, 05:14 PM IST

ಬಾಗಲಕೋಟೆಯಲ್ಲಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರ ಬಂಧನ. CEN ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳಿಂದ 127 ಶಾಲೆಗಳಿಗೆ ನೋಟಿಸ್ ಜಾರಿ.

ಅಕ್ರಮವಾಗಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು (Milk Powder) ಸಂಗ್ರಹಿಸಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸಲು ಯತ್ನಿಸುತ್ತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆಯಲ್ಲಿ CEN ಪೊಲೀಸರ ಭರ್ಜರಿ ಕಾರ್ಯಾಚರಣೆ  ನಡೆಸಿದ್ದು, ತನಿಖೆ ವೇಳೆ  ಆರೋಪಿ ಸತ್ಯ ಬಾಯಿ ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಆತಂಕ ಶುರುವಾಗಿದೆ. 127 ಸರ್ಕಾರಿ ಶಾಲೆಗಳಿಗೆ CEN ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಶ್ರೀಶೈಲದಿಂ ಸಬ್ ಲೀಜ್ ಪಡೆದು ಸಿದ್ದಪ್ಪನಿಂದ ಗೋಲ್​ಮಾಲ್ ನಡೆಸಿದ್ದು, ಅ.4ರಂದು ಸೂಳಿಕೇರಿ ಗ್ರಾಮದಲ್ಲಿ ನಡೆದಿದ್ದ CEN ಪೋಲಿಸರ ದಾಳಿ 
ಆರೋಪಿ ಸಿದ್ದಪ್ಪ ಸೇರಿ ಮೂವರ ವಿರುದ್ಧ FIR ದಾಖಲು ಮಾಡಲಾಗಿದೆ.

ರಾತ್ರಿ ಹಾಲಿನ ಪೌಡರ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಸಾಗಿಸಲು ಪ್ಲಾನ್​ ನಡೆದಿತ್ತು. ಈಗ ಗೂಡ್ಸ್  ವಾಹನ ಸಹಿತ ಸಿದ್ದಪ್ಪನ ಹೆಡೆಮುರಿ ಕಟ್ಟಿದ್ದ ಪೊಲೀಸರಿಗೆ 127 ಶಾಲೆಗಳಿಂದ ಕ್ಷೀರಭಾಗ್ಯ ಹಾಲಿನ ಪೌಡರ್ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾನೆ.

ಈ ಹಿನ್ನೆಲೆಯಲ್ಲಿ ಹುನಗುಂದ, ಬಾದಾಮಿ, ಬೀಳಗಿ ತಾಲೂಕಿನ ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಜಾರಿ ಹಿನ್ನಲೆ ಈಗಾಗಲೇ ವಿಚಾರಣೆಗೆ 27 ಜನರು ಹಾಜರಾಗಿದ್ದು, ಒಂದು ನೂರಕ್ಕೂ ಅಧಿಕ ಶಾಲೆಗಳಿಂದ ಇನ್ನು ವಿಚಾರಣೆ ಹಾಜರಾಗಿಲ್ಲ.

ಒಂದು ಶಾಲೆಗೆ 25 ಪ್ಯಾಕೇಟ್ ಪೈಕಿ 15 ಪ್ಯಾಕೇಟ್ ನೀಡುತ್ತಿದ್ದ ಸಿದ್ದಪ್ಪ. 10 ಪಾಕೆಟ್​ಗಳಿಗೆ 100 ರೂ. ನೀಡಿ ಪಡೆಯುತ್ತಿದ್ದೆ ಎಂದಿರೋ ಆರೋಪಿ. ಒಟ್ಟು 4,475 ಕೆಜಿ ಹಾಲಿ ಪೌಡರ್ ಸಂಗ್ರಹಿಸಿದ್ದ ಆರೋಪಿ ಸಿದ್ದಪ್ಪ. ಒಟ್ಟು 18 ಲಕ್ಷ ಪದಾರ್ಥ ವಶಕ್ಕೆ ಪಡೆದ ಸಿಇಎನ್ ಠಾಣೆ ಪೊಲೀಸರು. ಬಾಗಲಕೋಟೆ ಸಿಇಎನ್ ಠಾಣೆ ಪೋಲಿಸರಿಂದ ತನಿಖೆ ಮುಂದುವರೆದಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more