ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್‌ ಮಹಾರಾಷ್ಟ್ರದ ಪಾಲು!

Published : Dec 18, 2024, 05:14 PM IST

ಬಾಗಲಕೋಟೆಯಲ್ಲಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರ ಬಂಧನ. CEN ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳಿಂದ 127 ಶಾಲೆಗಳಿಗೆ ನೋಟಿಸ್ ಜಾರಿ.

ಅಕ್ರಮವಾಗಿ ಶಾಲಾ ಮಕ್ಕಳ ಕ್ಷೀರ ಭಾಗ್ಯದ ಹಾಲಿನ ಪುಡಿಯನ್ನು (Milk Powder) ಸಂಗ್ರಹಿಸಿ ಮಹಾರಾಷ್ಟ್ರಕ್ಕೆ (Maharashtra) ಸಾಗಿಸಲು ಯತ್ನಿಸುತ್ತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆಯಲ್ಲಿ CEN ಪೊಲೀಸರ ಭರ್ಜರಿ ಕಾರ್ಯಾಚರಣೆ  ನಡೆಸಿದ್ದು, ತನಿಖೆ ವೇಳೆ  ಆರೋಪಿ ಸತ್ಯ ಬಾಯಿ ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಆತಂಕ ಶುರುವಾಗಿದೆ. 127 ಸರ್ಕಾರಿ ಶಾಲೆಗಳಿಗೆ CEN ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಶ್ರೀಶೈಲದಿಂ ಸಬ್ ಲೀಜ್ ಪಡೆದು ಸಿದ್ದಪ್ಪನಿಂದ ಗೋಲ್​ಮಾಲ್ ನಡೆಸಿದ್ದು, ಅ.4ರಂದು ಸೂಳಿಕೇರಿ ಗ್ರಾಮದಲ್ಲಿ ನಡೆದಿದ್ದ CEN ಪೋಲಿಸರ ದಾಳಿ 
ಆರೋಪಿ ಸಿದ್ದಪ್ಪ ಸೇರಿ ಮೂವರ ವಿರುದ್ಧ FIR ದಾಖಲು ಮಾಡಲಾಗಿದೆ.

ರಾತ್ರಿ ಹಾಲಿನ ಪೌಡರ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಸಾಗಿಸಲು ಪ್ಲಾನ್​ ನಡೆದಿತ್ತು. ಈಗ ಗೂಡ್ಸ್  ವಾಹನ ಸಹಿತ ಸಿದ್ದಪ್ಪನ ಹೆಡೆಮುರಿ ಕಟ್ಟಿದ್ದ ಪೊಲೀಸರಿಗೆ 127 ಶಾಲೆಗಳಿಂದ ಕ್ಷೀರಭಾಗ್ಯ ಹಾಲಿನ ಪೌಡರ್ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾನೆ.

ಈ ಹಿನ್ನೆಲೆಯಲ್ಲಿ ಹುನಗುಂದ, ಬಾದಾಮಿ, ಬೀಳಗಿ ತಾಲೂಕಿನ ಶಾಲೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಜಾರಿ ಹಿನ್ನಲೆ ಈಗಾಗಲೇ ವಿಚಾರಣೆಗೆ 27 ಜನರು ಹಾಜರಾಗಿದ್ದು, ಒಂದು ನೂರಕ್ಕೂ ಅಧಿಕ ಶಾಲೆಗಳಿಂದ ಇನ್ನು ವಿಚಾರಣೆ ಹಾಜರಾಗಿಲ್ಲ.

ಒಂದು ಶಾಲೆಗೆ 25 ಪ್ಯಾಕೇಟ್ ಪೈಕಿ 15 ಪ್ಯಾಕೇಟ್ ನೀಡುತ್ತಿದ್ದ ಸಿದ್ದಪ್ಪ. 10 ಪಾಕೆಟ್​ಗಳಿಗೆ 100 ರೂ. ನೀಡಿ ಪಡೆಯುತ್ತಿದ್ದೆ ಎಂದಿರೋ ಆರೋಪಿ. ಒಟ್ಟು 4,475 ಕೆಜಿ ಹಾಲಿ ಪೌಡರ್ ಸಂಗ್ರಹಿಸಿದ್ದ ಆರೋಪಿ ಸಿದ್ದಪ್ಪ. ಒಟ್ಟು 18 ಲಕ್ಷ ಪದಾರ್ಥ ವಶಕ್ಕೆ ಪಡೆದ ಸಿಇಎನ್ ಠಾಣೆ ಪೊಲೀಸರು. ಬಾಗಲಕೋಟೆ ಸಿಇಎನ್ ಠಾಣೆ ಪೋಲಿಸರಿಂದ ತನಿಖೆ ಮುಂದುವರೆದಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more