ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

ಭ್ರಷ್ಟರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಚಿತ್ರೀಕರಣ ನಿಷೇಧಿಸಿ ಆದೇಶ!

Published : Jul 15, 2022, 07:37 PM IST

ಭ್ರಷ್ಟರ ಬೆನ್ನಿಗೆ ನಿಂತಿದೆಯಾ ರಾಜ್ಯ ಸರ್ಕಾರ! ಯಾವುದಕ್ಕೆ ಹೆದರ್ತಿದೆ ರಾಜ್ಯಸರ್ಕಾರ? ಪಾರದರ್ಶಕ ಆಡಳಿತ ಬೇಡ್ವಾ? ಹಾಗಾದ್ರೆ ಚಿತ್ರೀಕರಣ ನಿಷೇಧ ಯಾಕೆ?
 

ಬೆಂಗಳೂರು (ಜುಲೈ 15): ಕರ್ನಾಟಕ ಸರ್ಕಾರಕ್ಕೆ ಪಾರದರ್ಶಕ ಆಡಳಿತ ಬೇಡ ಎನ್ನುವಂತೆ ಕಾಣುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ಸರ್ಕಾರ ನಿಷೇಧ ಮಾಡಿದ್ದು, ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧಿಸಿ ಸರ್ಕಾರ ಅದೇಶ ಹೊರಡಿಸಿರುವ ಕಾರಣವೇನು?

ವಿಧಾನಸಭೆಯ ಕಲಾಪದ ಬಳಿಕ ಈಗ ಸರ್ಕಾರಿ ಕಚೇರಿಗಳನ್ನೂ ವಿಡಿಯೋ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಸರ್ಕಾರ ಅದೇಶಿಸಿದೆ. ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೆ ವಿಡಿಯೋ (Video) ಹಾಗೂ ಫೋಟೋಗಳನ್ನು (Photo) ತೆಗೆಯುವಂತಿಲ್ಲ ಎಂದು ಹೇಳಿದೆ. ಒಟ್ಟಾರೆಯಾಗಿ ಸರ್ಕಾರ ಲಂಚಬಾಕರ ಪರವಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಸ್ಮಶಾನಕ್ಕೆ ಜಾಗ ಕೊಡದ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಬಿಸಿ..!

ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಸುಪ್ರೀಂ ಕೋರ್ಟ್‌ (Supreem Court) ಹೇಳಿದೆ. ಇನ್ನೊಂದೆಡೆ ಕೋರ್ಟ್‌ ಕಲಾಪವನ್ನೇ ಸುಪ್ರೀಂ ಕೋರ್ಟ್‌ ಲೈವ್‌ ನೀಡುತ್ತಿದೆ. ಕೋರ್ಟ್‌ಗಳೇ ಪಾರದರ್ಶಕವಾಗಿರುವ ಸಮಯದಲ್ಲಿ ಜನರ ಸೇವೆಗೆ ಇರುವ ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ಮಾಡಬಾರದು ಎಂದು ಸರ್ಕಾರ ಆದೇಶ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more