ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೇಗಿದೆ ನೋಡೋಣ ಬನ್ನಿ

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೇಗಿದೆ ನೋಡೋಣ ಬನ್ನಿ

Published : Aug 05, 2022, 06:44 PM IST

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಾ.ರಾಜ್​ಕುಮಾರ್ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. 

ಬೆಂಗಳೂರು (ಆ.05): 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಾ.ರಾಜ್​ಕುಮಾರ್ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. ಲಾಲ್‌ಬಾಗ್‌ನಲ್ಲಿ ಈಗಾಗಲೇ ಚಿನ್ನ ಲೇಪಿತ ಅಪ್ಪು ಪ್ರತಿಮೆಯನ್ನು ನಿರ್ಮಿಸಲಾಗಿದೆ. ಗಾಜಿನ ಮನೆಯಲ್ಲಿ ಮೈಸೂರಿನ ‘ಶಕ್ತಿಧಾಮ’ ಗಾಜನೂರಿನ ಮನೆಯನ್ನು ನಿರ್ಮಿಸಲಾಗಿದ್ದು, ಹೊರಭಾಗದಲ್ಲಿ ಡಾ.ರಾಜ್‌ ಮತ್ತು ಪುನೀತ್‌ ಅವರ ಪ್ರತಿಮೆಗಳು ಎಲ್ಲರನ್ನೂ ಸ್ವಾಗತಿಸಲಿವೆ. 

3 ತಿಂಗಳಲ್ಲಿ 22000 ಕಿ.ಮೀ ಸಂಚಾರ, ದೇಶ ಪರ್ಯಟನೆ ಮಾಡಿರುವ ಅಮೃತ ಜೋಶಿ!

ಬಿದಿರಿನ ಚೌಕಟ್ಟಿನಲ್ಲಿ ಅರಳಿದ ಫೋಟೊಗಳು, ಡಾ. ರಾಜ್‌ ಮತ್ತು ಪುನೀತ್‌ ಬಗೆಗಿನ ಪೇಂಟಿಂಗ್‌ ಶಿಬಿರ, ಇವರ ಚಿತ್ರಗಳಿಗೆ ಜೀವ ತುಂಬಲು ನಾನಾ ಉಡುಗೆ-ತೊಡುಗೆ ತೊಟ್ಟು ಕಂಗೊಳಿಸಲಿರುವ ಮಕ್ಕಳು, ಮರಳಿನಲ್ಲಿ ಅರಳಿರುವ ಡಾ. ರಾಜ್‌ ಮತ್ತು ಪುನೀತ್‌ ಪ್ರತಿಮೆಗಳು. ಉದ್ಯಾನದ ಹೊರಾಂಗಣದಲ್ಲಿ ಎಲ್‌ಇಡಿ ಪರದೆಗಳ ಮೂಲಕ ರಾಜ್‌ ಮತ್ತು ಪುನೀತ್‌ ಅವರ ವಿರಾಟ್‌ ದರ್ಶನ ಪ್ರದರ್ಶನಗೊಳ್ಳಲಿದೆ. ಆಗಸ್ಟ್ 15 ರವರೆಗೆ ಈ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು, ಪ್ರವಾಸಿಗರು, ವಿದೇಶಿ ಪ್ರೇಕ್ಷಕರು ಹಾಗೂ ಹೆಚ್ಚಾಗಿ ಶಾಲಾ ಮಕ್ಕಳ ಆಗಮಿಸುವ ನಿರೀಕ್ಷೆಯಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6:30ರ ವರೆಗೆ ಫ್ಲವರ್ ಶೋ ಓಪನ್ ಇರಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more