ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೇಗಿದೆ ನೋಡೋಣ ಬನ್ನಿ

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೇಗಿದೆ ನೋಡೋಣ ಬನ್ನಿ

Published : Aug 05, 2022, 06:44 PM IST

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಾ.ರಾಜ್​ಕುಮಾರ್ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. 

ಬೆಂಗಳೂರು (ಆ.05): 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಾ.ರಾಜ್​ಕುಮಾರ್ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. ಲಾಲ್‌ಬಾಗ್‌ನಲ್ಲಿ ಈಗಾಗಲೇ ಚಿನ್ನ ಲೇಪಿತ ಅಪ್ಪು ಪ್ರತಿಮೆಯನ್ನು ನಿರ್ಮಿಸಲಾಗಿದೆ. ಗಾಜಿನ ಮನೆಯಲ್ಲಿ ಮೈಸೂರಿನ ‘ಶಕ್ತಿಧಾಮ’ ಗಾಜನೂರಿನ ಮನೆಯನ್ನು ನಿರ್ಮಿಸಲಾಗಿದ್ದು, ಹೊರಭಾಗದಲ್ಲಿ ಡಾ.ರಾಜ್‌ ಮತ್ತು ಪುನೀತ್‌ ಅವರ ಪ್ರತಿಮೆಗಳು ಎಲ್ಲರನ್ನೂ ಸ್ವಾಗತಿಸಲಿವೆ. 

3 ತಿಂಗಳಲ್ಲಿ 22000 ಕಿ.ಮೀ ಸಂಚಾರ, ದೇಶ ಪರ್ಯಟನೆ ಮಾಡಿರುವ ಅಮೃತ ಜೋಶಿ!

ಬಿದಿರಿನ ಚೌಕಟ್ಟಿನಲ್ಲಿ ಅರಳಿದ ಫೋಟೊಗಳು, ಡಾ. ರಾಜ್‌ ಮತ್ತು ಪುನೀತ್‌ ಬಗೆಗಿನ ಪೇಂಟಿಂಗ್‌ ಶಿಬಿರ, ಇವರ ಚಿತ್ರಗಳಿಗೆ ಜೀವ ತುಂಬಲು ನಾನಾ ಉಡುಗೆ-ತೊಡುಗೆ ತೊಟ್ಟು ಕಂಗೊಳಿಸಲಿರುವ ಮಕ್ಕಳು, ಮರಳಿನಲ್ಲಿ ಅರಳಿರುವ ಡಾ. ರಾಜ್‌ ಮತ್ತು ಪುನೀತ್‌ ಪ್ರತಿಮೆಗಳು. ಉದ್ಯಾನದ ಹೊರಾಂಗಣದಲ್ಲಿ ಎಲ್‌ಇಡಿ ಪರದೆಗಳ ಮೂಲಕ ರಾಜ್‌ ಮತ್ತು ಪುನೀತ್‌ ಅವರ ವಿರಾಟ್‌ ದರ್ಶನ ಪ್ರದರ್ಶನಗೊಳ್ಳಲಿದೆ. ಆಗಸ್ಟ್ 15 ರವರೆಗೆ ಈ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು, ಪ್ರವಾಸಿಗರು, ವಿದೇಶಿ ಪ್ರೇಕ್ಷಕರು ಹಾಗೂ ಹೆಚ್ಚಾಗಿ ಶಾಲಾ ಮಕ್ಕಳ ಆಗಮಿಸುವ ನಿರೀಕ್ಷೆಯಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6:30ರ ವರೆಗೆ ಫ್ಲವರ್ ಶೋ ಓಪನ್ ಇರಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more