ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೇಗಿದೆ ನೋಡೋಣ ಬನ್ನಿ

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೇಗಿದೆ ನೋಡೋಣ ಬನ್ನಿ

Published : Aug 05, 2022, 06:44 PM IST

75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಾ.ರಾಜ್​ಕುಮಾರ್ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. 

ಬೆಂಗಳೂರು (ಆ.05): 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಾ.ರಾಜ್​ಕುಮಾರ್ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. ಲಾಲ್‌ಬಾಗ್‌ನಲ್ಲಿ ಈಗಾಗಲೇ ಚಿನ್ನ ಲೇಪಿತ ಅಪ್ಪು ಪ್ರತಿಮೆಯನ್ನು ನಿರ್ಮಿಸಲಾಗಿದೆ. ಗಾಜಿನ ಮನೆಯಲ್ಲಿ ಮೈಸೂರಿನ ‘ಶಕ್ತಿಧಾಮ’ ಗಾಜನೂರಿನ ಮನೆಯನ್ನು ನಿರ್ಮಿಸಲಾಗಿದ್ದು, ಹೊರಭಾಗದಲ್ಲಿ ಡಾ.ರಾಜ್‌ ಮತ್ತು ಪುನೀತ್‌ ಅವರ ಪ್ರತಿಮೆಗಳು ಎಲ್ಲರನ್ನೂ ಸ್ವಾಗತಿಸಲಿವೆ. 

3 ತಿಂಗಳಲ್ಲಿ 22000 ಕಿ.ಮೀ ಸಂಚಾರ, ದೇಶ ಪರ್ಯಟನೆ ಮಾಡಿರುವ ಅಮೃತ ಜೋಶಿ!

ಬಿದಿರಿನ ಚೌಕಟ್ಟಿನಲ್ಲಿ ಅರಳಿದ ಫೋಟೊಗಳು, ಡಾ. ರಾಜ್‌ ಮತ್ತು ಪುನೀತ್‌ ಬಗೆಗಿನ ಪೇಂಟಿಂಗ್‌ ಶಿಬಿರ, ಇವರ ಚಿತ್ರಗಳಿಗೆ ಜೀವ ತುಂಬಲು ನಾನಾ ಉಡುಗೆ-ತೊಡುಗೆ ತೊಟ್ಟು ಕಂಗೊಳಿಸಲಿರುವ ಮಕ್ಕಳು, ಮರಳಿನಲ್ಲಿ ಅರಳಿರುವ ಡಾ. ರಾಜ್‌ ಮತ್ತು ಪುನೀತ್‌ ಪ್ರತಿಮೆಗಳು. ಉದ್ಯಾನದ ಹೊರಾಂಗಣದಲ್ಲಿ ಎಲ್‌ಇಡಿ ಪರದೆಗಳ ಮೂಲಕ ರಾಜ್‌ ಮತ್ತು ಪುನೀತ್‌ ಅವರ ವಿರಾಟ್‌ ದರ್ಶನ ಪ್ರದರ್ಶನಗೊಳ್ಳಲಿದೆ. ಆಗಸ್ಟ್ 15 ರವರೆಗೆ ಈ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು, ಪ್ರವಾಸಿಗರು, ವಿದೇಶಿ ಪ್ರೇಕ್ಷಕರು ಹಾಗೂ ಹೆಚ್ಚಾಗಿ ಶಾಲಾ ಮಕ್ಕಳ ಆಗಮಿಸುವ ನಿರೀಕ್ಷೆಯಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6:30ರ ವರೆಗೆ ಫ್ಲವರ್ ಶೋ ಓಪನ್ ಇರಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more