ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

ಕೋರಮಂಗಲ ಆಕ್ಸಿಡೆಂಟ್‌ ಬಗ್ಗೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ!

Published : Sep 02, 2021, 09:47 AM ISTUpdated : Sep 02, 2021, 10:23 AM IST

- ಕೋರಮಂಗಲ ಭೀಕರ ಅಪಘಾತ ಪ್ರಕರಣ: ಇಂದ್ರಜಿತ್ ಲಂಕೇಶ್ ಟ್ವಿಸ್ಟಿಂಗ್ ಹೇಳಿಕೆ

- ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಇಂದ್ರಜಿತ್

- ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣ ಸಾವು

ಬೆಂಗಳೂರು (ಸೆ. 02): ಕೋರಮಂಗಲ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇವಲ ಮದ್ಯ ಸೇವಿಸಿದರೆ ಈ ರೀತಿ ಅಪಘಾತವಾಗುತ್ತಿರಲಿಲ್ಲ. ಡ್ರಿಂಕ್ಸ್ ಜೊತೆ ಡ್ರಗ್ಸ್ ತೆಗೆದುಕೊಂಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. 

ಐಷಾರಾಮಿ ಆಡಿ ಕಾರಿನಲ್ಲಿ ಜಾಲಿ ರೈಡ್‌ ನಡೆಸುವಾಗ ಅಪಘಾತ ಸಂಭವಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶಾಸಕರ ಪುತ್ರ ಸೇರಿದಂತೆ 7 ಮಂದಿ ದಾರುಣವಾಗಿ ಸಾವಿಗೀಡಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 

ಬೆಂಗಳೂರಿಗೆ ಸಮೀಪದಲ್ಲಿರುವ ಕೃಷ್ಣಗಿರಿ ಜಿಲ್ಲೆಯ ಹೊಸೂರು ಶಾಸಕ ವೈ.ಪ್ರಕಾಶ್‌ ಅವರ ಏಕೈಕ ಪುತ್ರ ಕರುಣಾ ಸಾಗರ್‌ (25), ಕೋರಮಂಗಲದ 5ನೇ ಬ್ಲಾಕ್‌ ನಿವಾಸಿ ಮಹಾರಾಷ್ಟ್ರ ಮೂಲದ ಇಷಿತಾ ಬಿಸ್ವಾಸ್‌ (21), ಕೋರಮಂಗಲದ ನಿವಾಸಿ ಕೇರಳ ಮೂಲದ ದಂತ ವೈದ್ಯೆ ಧನುಷಾ (29), ಮುರುಗೇಶ್‌ ಪಾಳ್ಯದ ಬಿಂದು (28), ಕೋರಮಂಗಲದ ನಿವಾಸಿ ಕೇರಳ ಮೂಲದ ಖಾಸಗಿ ಕಂಪನಿ ಉದ್ಯೋಗಿ ಅಕ್ಷಯ್‌ ಗೋಯಲ್‌ (25), ಹರಿಯಾಣದ ಆಡಿಟರ್‌ ಉತ್ಸವ್‌ (25) ಹಾಗೂ ಹುಬ್ಬಳ್ಳಿಯ ರೋಹಿತ್‌ (23) ಮೃತ ದುರ್ದೈವಿಗಳು.

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!