ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

ಹೊಸೂರಿನ ಬದಲು ಬೆಂಗಳೂರು ಗ್ರಾಮಾಂತರಕ್ಕೆ ಮೆಟ್ರೋ ಕಲ್ಪಿಸಲಿ: ಕರವೇ ಪ್ರವೀಣ್ ಕುಮಾರ್

Published : Aug 04, 2023, 08:46 PM IST

ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. 
 

ಬೆಂಗಳೂರು (ಆ.04): ಬೊಮ್ಮಸಂದ್ರ-ಹೊಸೂರು ಮೆಟ್ರೋ ಅಧ್ಯಯನಕ್ಕೆ ಟೆಂಡರ್‌ ಕರೆಯಲು ಮುಂದಾಗಿದ್ದು, ಇದಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡಿಸಿದ್ದಾರೆ. ಬೊಮ್ಮಸಂದ್ರ - ಹೊಸೂರು ಮೆಟ್ರೋ ಆಗುವುದಕ್ಕೆ ಬಿಡೋದಿಲ್ಲ. ಒಂದು ವೇಳೆ ಮೆಟ್ರೋ ಆದರೆ ತಮಿಳರಿಗೆ ರೆಡ್ ಕಾರ್ಪೆಟ್ ಹಾಸಿದ ಹಾಗಾಗುತ್ತೆ. ನಾವು ಕನ್ನಡಿಗರು ಯಾರೂ ಕೆಲಸ ಅರಸಿ ಹೊಸೂರಿಗೆ ಹೋಗೋದಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ತಮಿಳರ ಸಂಖ್ಯೆ ಜಾಸ್ತಿಯಾಗಿದೆ. ನಮ್ಮ ಉದ್ಯೋಗವನ್ನು ಕಿತ್ತುಕೊಳ್ತಿದಾರೆ. ನಮಗೆ ಕಾವೇರಿ ನೀರಿನ ವಿಚಾರದಲ್ಲಿ ತಗಾದೆ ತೆಗೆದವರು ತಮಿಳರು. ಅವರಿಗೆ ನಾವ್ಯಾಕೆ ಮೆಟ್ರೋ ಮಾಡೋಕೆ ಬಿಡ್ಬೇಕು?

ಅಲ್ಲಿ ಮಾಡೋ ಬದಲು ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಮೆಟ್ರೋ ಸೇವೆ ಕಲ್ಪಿಸಲಿ. ನಮ್ಮ ಕನ್ನಡಿಗರಿಗೆ ಇದರಿಂದ ಉಪಯೋಗ ಆಗುತ್ತೆ. ದೇವನಹಳ್ಳಿ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಿಂದ ಬರುವವರಿಗೆ ಇದರಿಂದ ಸಹಾಯ ಆಗುತ್ತೆ. ಕೇಂದ್ರ ಸರ್ಕಾರ ಈ ತರಹದ ನೀತಿಗಳಿಂದ ಈಗಾಗಲೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಒಂದು ವೇಳೆ ಮೆಟ್ರೋಗೆ ಅನುಮೋದನೆ ಕೊಟ್ರೆ ತಮಿಳು ನಟರ ಹೆಸರನ್ನೇ ಮೆಟ್ರೋ ಸ್ಟೇಷನ್‌ಗೆ ಇಡ್ತಾರೆ. ಅವರ ಬ್ಯಾನರ್‌ಗಳನ್ನೇ ನಾವು ನೋಡ್ಬೇಕಾಗುತ್ತೆ. ಈ ಬಗ್ಗೆ ಸಂಸದರನ್ನು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಾವು ಮನವಿ ಮಾಡ್ತೇವೆ. ಇದರ ಜೊತೆಗೆ ಕರವೇ ಕಡೆಯಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more