ಮಣ್ಣು ಉಳಿಸಿ ಅಭಿಯಾನ: ಬೆಂಗಳೂರು ಅರಮನೆ ಮೈದಾನದಲ್ಲಿ ಈಶ ಫೌಂಡೇಶನ್‌ನಿಂದ ಬೃಹತ್ ಸಮಾವೇಶ

Jun 19, 2022, 10:56 AM IST

ಬೆಂಗಳೂರು (ಜೂ. 19):  ಮಣ್ಣು ಉಳಿಸಿ (Save Soil) ಅಭಿಯಾನದ ಭಾಗವಾಗಿ ದೇಶ ವಿದೇಶಗಳಲ್ಲಿ ಬೈಕ್‌ಯಾತ್ರೆ ನಡೆಸುತ್ತಿರುವ ಈಶ ಫೌಂಡೇಶನ್‌ನ (Isha Foundation) ಸದ್ಗುರು  ಸಿಲಿಕಾನ್‌ಸಿಟಿ ಬೆಂಗಳೂರಿಗೆ ಆಗಮಿಸಿದರು.

ಅಭಿಯಾನದ ಭಾಗವಾಗಿ ಇಂದು ಬೆಳಿಗ್ಗೆ 11ಕ್ಕೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೃಹತ್‌ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮಣ್ಣು ಉಳಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿ, ಈಶ ಫೌಂಡೇಶನ್‌ ಜತೆಗೆ ಮಣ್ಣು ಉಳಿಸುವ ನಿಟ್ಟಿನಲ್ಲಿ ಅತ್ಯಗತ್ಯವಾದ ಕಾರ್ಯನೀತಿಗಳನ್ನು ಜಾರಿಗೊಳಿಸುವ ಒಡಂಬಡಿಕೆ ಕೂಡ ಮಾಡಿಕೊಳ್ಳಲಿದೆ. ಬಳಿಕ ಸಂಜೆ ಸದ್ಗುರು ಬೈಕ್‌ ಯಾತ್ರೆಯು ಮೈಸೂರಿನತ್ತ ಸಾಗಲಿದೆ.

Save Soil movement: ಮಣ್ಣು ಉಳಿಸಿ ಅಭಿಯಾನಕ್ಕೆ ಸದ್ಗುರು ಜತೆ ಮಹಾರಾಷ್ಟ್ರ ಒಪ್ಪಂದ

ಅಭಿಯಾನದ ಭಾಗವಾಗಿ ಮಾರ್ಚ್ 21ರಂದು ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭಿಸಿದ್ದು, ಬೆಂಗಳೂರಿಗೆ ತಲುಪಿ 27298 ಕಿ.ಮೀ ಪೂರ್ಣಗೊಂಡಿದೆ. ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 9 ರಾಜ್ಯಗಳಿಗೆ ತೆರಳಿ ಅಲ್ಲಿನ ಸರ್ಕಾರಗಳಿಗೆ ಮಣ್ಣಿನ ಅಧ್ಯಯನದ ವರದಿ ನೀಡಿ, ಮಣ್ಣನ್ನು ಉಳಿಸಲು ಕೈಗೊಳ್ಳಬೇಕಾದ ಕಾರ್ಯನೀತಿಯನ್ನು ನೀಡಲಾಗಿದೆ. ಹಲವು ದೇಶಗಳಿಗೆ ಕಾರ್ಯನೀತಿಯನ್ನು ಆನ್‌ಲೈನ್‌ ಮೂಲಕ ತಲುಪಿಸಲಾಗಿದೆ. ಈವರೆಗೂ 74 ದೇಶಗಳು, ಭಾರತದ 9 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಒಪ್ಪಿವೆ ಎಂದು ಮಾಹಿತಿ ನೀಡಿದರು.