42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

Published : Oct 14, 2023, 11:56 AM IST

ಮಂಚದ ಕೆಳಗೆ 22 ಬಾಕ್ಸ್..ಐಟಿ ದಾಳಿ ವೇಳೆ ಸಿಕ್ದಿದ್ದು 42 ಕೋಟಿ..!
ಪಂಚರಾಜ್ಯ ಚುನಾವಣೆಗೆ ರಾಜ್ಯದಿಂದ ಹೋಗ್ತಿದ್ಯಾ ಕಂತೆ ದುಡ್ಡು..?
42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕುಬೇರ..?

ಮಲಗೋ ಮಂಚದ ಕೆಳಗೆ ಕಂತೆ ಕಂತೆ ದುಡ್ಡಿನ ರಾಶಿ. ಮಂಚದ ಕೆಳಗೆ 22 ಬಾಕ್ಸ್.. ಆ 22 ಬಾಕ್ಸ್‌ಗಳಲ್ಲಿ ಐನೂರರ ಗರಿ ಗರಿ ನೋಟುಗಳು. ಎಣಿಸಿದ್ರೆ ಬರೋಬ್ಬರಿ 42 ಕೋಟಿ ರೂಪಾಯಿ. ಇದು ವಸೂಲಿ ದುಡ್ಡು ಅಂತ ಬಿಜೆಪಿ ಶಾಸಕ ಡಾ.ಅಶ್ವತ್ಥನಾರಾಯಣ ಆರೋಪಿಸ್ತಾ ಇದ್ದಾರೆ. ಇದು ಸಿಕ್ಕಿರೋದು ಅಂಬಿಕಾಪತಿ ಅನ್ನೋ ಗುತ್ತಿಗೆದಾರ ಕಮ್ ಬಿಲ್ಡರ್ ಮನೆಯಲ್ಲಿ. ಬೆಂಗಳೂರಿನಲ್ಲಿ(Bengaluru ) ಗುರುವಾರ ಮತ್ತು ಶುಕ್ರವಾರ ಐಟಿ ದಾಳಿ ನಡೆಸಿದ್ದು, ಈ ವೇಳೆ ಕೋಟಿ ಕುಬೇರನ ಕೋಟೆಯೊಳಗೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಬೆಂಗಳೂರಿನ ಕಾವಲ್‌ಭೈರಸಂಧ್ರದ ಗಣೇಶ ಬ್ಲಾಕ್‌ನಲ್ಲಿರುವ ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಬಿಕಾಪತಿ ಮಗನ ಮನೆ, ಆರ್.ಟಿ ನಗರದ ವೈಟ್ ಹೌಸ್'ನಲ್ಲಿರುವ ಮನೆ,  ಮಾನ್ಯತಾ ಟೆಕ್ ಪಾರ್ಕ್ ಬಳಿ ಇರೋ ಮಗಳ ಮನೆ.. ಹೀಗೆ ಅಂಬಿಕಾಪತಿಗೆ ಸೇರಿದ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ತಲಾಷ್ ನಡೆಸಿದ್ದಾರೆ. ಅಂದ ಹಾಗೆ ಈ 42 ಕೋಟಿ ರೂಪಾಯಿ ಸಿಕ್ಕಿರೋದು ಅಂಬಿಕಾಪತಿಯ ಸಂಬಂಧಿ ಪ್ರದೀಪ್ ಎಂಬುವರ ಮನೆಯಲ್ಲಿ ಅನ್ನೋ ಮಾಹಿತಿ ಲಭ್ಯವಾಗಿದೆ. ಗುತ್ತಿಗೆದಾರ ಅಂಬಿಕಾಪತಿ(Ambikapati) ಕೋಟೆಯಲ್ಲಿ ಸಿಕ್ಕಿದ 42 ಕೋಟಿ ರೂಪಾಯಿಯ ಸುತ್ತ ನೂರೆಂಟು ಪ್ರಶ್ನೆಗಳು ಎದ್ದಿವೆ. ದುಡ್ಡಿನ ರಾಶಿಯನ್ನು ಐಟಿ ಪತ್ತೆ ಮಾಡ್ತಿದ್ದಂತೆ ಈ ದುಡ್ಡಿನ ಅಸಲಿ ಮಾಲಿಕ ಯಾರು ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿದೆ. ಇದು ಬೆಂಗಳೂರಿನ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ಹಣ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಇದನ್ನೂ ವೀಕ್ಷಿಸಿ:  ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more