42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

Published : Oct 14, 2023, 11:56 AM IST

ಮಂಚದ ಕೆಳಗೆ 22 ಬಾಕ್ಸ್..ಐಟಿ ದಾಳಿ ವೇಳೆ ಸಿಕ್ದಿದ್ದು 42 ಕೋಟಿ..!
ಪಂಚರಾಜ್ಯ ಚುನಾವಣೆಗೆ ರಾಜ್ಯದಿಂದ ಹೋಗ್ತಿದ್ಯಾ ಕಂತೆ ದುಡ್ಡು..?
42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕುಬೇರ..?

ಮಲಗೋ ಮಂಚದ ಕೆಳಗೆ ಕಂತೆ ಕಂತೆ ದುಡ್ಡಿನ ರಾಶಿ. ಮಂಚದ ಕೆಳಗೆ 22 ಬಾಕ್ಸ್.. ಆ 22 ಬಾಕ್ಸ್‌ಗಳಲ್ಲಿ ಐನೂರರ ಗರಿ ಗರಿ ನೋಟುಗಳು. ಎಣಿಸಿದ್ರೆ ಬರೋಬ್ಬರಿ 42 ಕೋಟಿ ರೂಪಾಯಿ. ಇದು ವಸೂಲಿ ದುಡ್ಡು ಅಂತ ಬಿಜೆಪಿ ಶಾಸಕ ಡಾ.ಅಶ್ವತ್ಥನಾರಾಯಣ ಆರೋಪಿಸ್ತಾ ಇದ್ದಾರೆ. ಇದು ಸಿಕ್ಕಿರೋದು ಅಂಬಿಕಾಪತಿ ಅನ್ನೋ ಗುತ್ತಿಗೆದಾರ ಕಮ್ ಬಿಲ್ಡರ್ ಮನೆಯಲ್ಲಿ. ಬೆಂಗಳೂರಿನಲ್ಲಿ(Bengaluru ) ಗುರುವಾರ ಮತ್ತು ಶುಕ್ರವಾರ ಐಟಿ ದಾಳಿ ನಡೆಸಿದ್ದು, ಈ ವೇಳೆ ಕೋಟಿ ಕುಬೇರನ ಕೋಟೆಯೊಳಗೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಬೆಂಗಳೂರಿನ ಕಾವಲ್‌ಭೈರಸಂಧ್ರದ ಗಣೇಶ ಬ್ಲಾಕ್‌ನಲ್ಲಿರುವ ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಬಿಕಾಪತಿ ಮಗನ ಮನೆ, ಆರ್.ಟಿ ನಗರದ ವೈಟ್ ಹೌಸ್'ನಲ್ಲಿರುವ ಮನೆ,  ಮಾನ್ಯತಾ ಟೆಕ್ ಪಾರ್ಕ್ ಬಳಿ ಇರೋ ಮಗಳ ಮನೆ.. ಹೀಗೆ ಅಂಬಿಕಾಪತಿಗೆ ಸೇರಿದ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ತಲಾಷ್ ನಡೆಸಿದ್ದಾರೆ. ಅಂದ ಹಾಗೆ ಈ 42 ಕೋಟಿ ರೂಪಾಯಿ ಸಿಕ್ಕಿರೋದು ಅಂಬಿಕಾಪತಿಯ ಸಂಬಂಧಿ ಪ್ರದೀಪ್ ಎಂಬುವರ ಮನೆಯಲ್ಲಿ ಅನ್ನೋ ಮಾಹಿತಿ ಲಭ್ಯವಾಗಿದೆ. ಗುತ್ತಿಗೆದಾರ ಅಂಬಿಕಾಪತಿ(Ambikapati) ಕೋಟೆಯಲ್ಲಿ ಸಿಕ್ಕಿದ 42 ಕೋಟಿ ರೂಪಾಯಿಯ ಸುತ್ತ ನೂರೆಂಟು ಪ್ರಶ್ನೆಗಳು ಎದ್ದಿವೆ. ದುಡ್ಡಿನ ರಾಶಿಯನ್ನು ಐಟಿ ಪತ್ತೆ ಮಾಡ್ತಿದ್ದಂತೆ ಈ ದುಡ್ಡಿನ ಅಸಲಿ ಮಾಲಿಕ ಯಾರು ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿದೆ. ಇದು ಬೆಂಗಳೂರಿನ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ಹಣ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಇದನ್ನೂ ವೀಕ್ಷಿಸಿ:  ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more