42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕೋಟಿ ಕುಬೇರ..? ಯಾರಿಗೆ ಕಾದಿದೆ ಫಜೀತಿ..?

Published : Oct 14, 2023, 11:56 AM IST

ಮಂಚದ ಕೆಳಗೆ 22 ಬಾಕ್ಸ್..ಐಟಿ ದಾಳಿ ವೇಳೆ ಸಿಕ್ದಿದ್ದು 42 ಕೋಟಿ..!
ಪಂಚರಾಜ್ಯ ಚುನಾವಣೆಗೆ ರಾಜ್ಯದಿಂದ ಹೋಗ್ತಿದ್ಯಾ ಕಂತೆ ದುಡ್ಡು..?
42 ಕೋಟಿಯ ಹಿಂದೆ ಪ್ರಭಾವಿ ರಾಜಕಾರಣಿ..ಯಾರದು ಕುಬೇರ..?

ಮಲಗೋ ಮಂಚದ ಕೆಳಗೆ ಕಂತೆ ಕಂತೆ ದುಡ್ಡಿನ ರಾಶಿ. ಮಂಚದ ಕೆಳಗೆ 22 ಬಾಕ್ಸ್.. ಆ 22 ಬಾಕ್ಸ್‌ಗಳಲ್ಲಿ ಐನೂರರ ಗರಿ ಗರಿ ನೋಟುಗಳು. ಎಣಿಸಿದ್ರೆ ಬರೋಬ್ಬರಿ 42 ಕೋಟಿ ರೂಪಾಯಿ. ಇದು ವಸೂಲಿ ದುಡ್ಡು ಅಂತ ಬಿಜೆಪಿ ಶಾಸಕ ಡಾ.ಅಶ್ವತ್ಥನಾರಾಯಣ ಆರೋಪಿಸ್ತಾ ಇದ್ದಾರೆ. ಇದು ಸಿಕ್ಕಿರೋದು ಅಂಬಿಕಾಪತಿ ಅನ್ನೋ ಗುತ್ತಿಗೆದಾರ ಕಮ್ ಬಿಲ್ಡರ್ ಮನೆಯಲ್ಲಿ. ಬೆಂಗಳೂರಿನಲ್ಲಿ(Bengaluru ) ಗುರುವಾರ ಮತ್ತು ಶುಕ್ರವಾರ ಐಟಿ ದಾಳಿ ನಡೆಸಿದ್ದು, ಈ ವೇಳೆ ಕೋಟಿ ಕುಬೇರನ ಕೋಟೆಯೊಳಗೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಬೆಂಗಳೂರಿನ ಕಾವಲ್‌ಭೈರಸಂಧ್ರದ ಗಣೇಶ ಬ್ಲಾಕ್‌ನಲ್ಲಿರುವ ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಬಿಕಾಪತಿ ಮಗನ ಮನೆ, ಆರ್.ಟಿ ನಗರದ ವೈಟ್ ಹೌಸ್'ನಲ್ಲಿರುವ ಮನೆ,  ಮಾನ್ಯತಾ ಟೆಕ್ ಪಾರ್ಕ್ ಬಳಿ ಇರೋ ಮಗಳ ಮನೆ.. ಹೀಗೆ ಅಂಬಿಕಾಪತಿಗೆ ಸೇರಿದ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ತಲಾಷ್ ನಡೆಸಿದ್ದಾರೆ. ಅಂದ ಹಾಗೆ ಈ 42 ಕೋಟಿ ರೂಪಾಯಿ ಸಿಕ್ಕಿರೋದು ಅಂಬಿಕಾಪತಿಯ ಸಂಬಂಧಿ ಪ್ರದೀಪ್ ಎಂಬುವರ ಮನೆಯಲ್ಲಿ ಅನ್ನೋ ಮಾಹಿತಿ ಲಭ್ಯವಾಗಿದೆ. ಗುತ್ತಿಗೆದಾರ ಅಂಬಿಕಾಪತಿ(Ambikapati) ಕೋಟೆಯಲ್ಲಿ ಸಿಕ್ಕಿದ 42 ಕೋಟಿ ರೂಪಾಯಿಯ ಸುತ್ತ ನೂರೆಂಟು ಪ್ರಶ್ನೆಗಳು ಎದ್ದಿವೆ. ದುಡ್ಡಿನ ರಾಶಿಯನ್ನು ಐಟಿ ಪತ್ತೆ ಮಾಡ್ತಿದ್ದಂತೆ ಈ ದುಡ್ಡಿನ ಅಸಲಿ ಮಾಲಿಕ ಯಾರು ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿದೆ. ಇದು ಬೆಂಗಳೂರಿನ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ಹಣ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಇದನ್ನೂ ವೀಕ್ಷಿಸಿ:  ಆಂಧ್ರಕ್ಕೆ ಸಮರ್ಪಕ ನೀರು ರಾಜ್ಯದ ರೈತರಿಗೆ ಕಣ್ಣೀರು: ಮೆಣಸಿನಕಾಯಿ, ಹತ್ತಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more