5 States Election: 'ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆ, ಪರಾಮರ್ಶೆ ಅಗತ್ಯ: ಧ್ರುವ ನಾರಾಯಣ್

Mar 10, 2022, 5:51 PM IST

ಪಂಚರಾಜ್ಯ ಚುನಾವಣೆಯಲ್ಲಿ ಜನರ ತೀರ್ಪಿಗೆ ನಾವು ತಲೆ ಬಾಗಲೇಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪೇ ಅಂತಿಮವಾಗುತ್ತೆ. ಇದೊಂದು ಎಚ್ಚರಿಕೆಯ ಗಂಟೆ. ನಾವು ಪರಾಮರ್ಶೆ ಮಾಡಿಕೊಳ್ಳಬೇಕಿದೆ' ಎಂದು  ಮೈಸೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಹೇಳಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಕೂಡ ಬಾಕಿ‌ ಇದೆ. ರಾಜ್ಯ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಳ್ಳಬೇಕಿದೆ. ಬಿಜೆಪಿ ಕೇವಲ ಚುನಾವಣೆ ಸಂದರ್ಭದಲ್ಲಿ ತಂತ್ರಗಾರಿಕೆ ಮಾಡುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಅವರಿಗೆ ಆಸಕ್ತಿ ಇಲ್ಲ. ಸೋಲಿನ ಜವಾಬ್ದಾರಿಯನ್ನ ಆಯಾ ರಾಜ್ಯದ ನಾಯಕರೇ ಹೊರಬೇಕಿದೆ' ಎಂದು ಆರ್ ಧ್ರುವನಾರಾಯಣ್ ಹೇಳಿದ್ದಾರೆ.