6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

Published : Aug 25, 2022, 08:27 PM IST

ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ  ಸಾವನಪ್ಪಿದ ಕಾರ್ಮಿಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡಿದ್ದಾರೆ
 

ಬೆಂಗಳೂರು (ಆ. 25): ತುಮಕೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವು ಕಂಡ ಕಾರ್ಮಿಕರ ಕುಟುಂಬಸ್ಥರು, ಪ್ರೀತಿ ಪಾತ್ರರ ಸಾವಿನ ವೇಳೆಯಲ್ಲೂ ಸಾರ್ಥಕಥೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡುವ ಮೂಲಕ ಇನ್ನೊಬ್ಬರ ಬಾಳಿಗೆ ಬೆಳಕಾಗಿದ್ದಾರೆ.

ಗುರುವಾರ ಬೆಳಗ್ಗೆ ಶಿರಾದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಕಾರ್ಮಿಕರು ಸಾವು ಕಂಡಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಇವರ ನೇತ್ರದಾನ ಮಾಡಲಾಗಿದೆ. ಅಪಘಾತದಲ್ಲಿ ಮೃತರಾದ ಇಬ್ಬರು ಮಹಿಳೆಯರು ಒಂದು ಮಗು ಹಾಗೂ ಮೂವರು ಪುರುಷರು ಕಣ್ಣುಗಳನ್ನು ದಾನ ಮಾಡಲಾಗಿದೆ. ಕ್ರೂಸರ್‌ ಚಾಲಕನ ನಿರ್ಲಕ್ಷ್ಯದಿಂದಾಗಿ 9 ಮಂದಿ ಬಡ ಜೀವಗಳು ಬಲಿಯಾಗಿದ್ದವು.

Karnataka Accident News: ಭೀಕರ ಅಪಘಾತ; ರಾಯಚೂರು ಮೂಲದ 9 ಮಂದಿ ಸ್ಥಳದಲ್ಲೇ ದುರ್ಮರಣ!

ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಇದರ ನಡುವೆಯೂ ನೇತ್ರದಾನದ ನಿರ್ಧಾರವನ್ನು ಅವರ ಕುಟುಂಬಸ್ಥರು ತೆಗೆದುಕೊಂಡಿದ್ದಾರೆ. ಇದರ ನಡುವೆ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಅದರೊಂದಿಗೆ ಗಾಯಾಳುಗಳ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!