6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

Published : Aug 25, 2022, 08:27 PM IST

ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ  ಸಾವನಪ್ಪಿದ ಕಾರ್ಮಿಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡಿದ್ದಾರೆ
 

ಬೆಂಗಳೂರು (ಆ. 25): ತುಮಕೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವು ಕಂಡ ಕಾರ್ಮಿಕರ ಕುಟುಂಬಸ್ಥರು, ಪ್ರೀತಿ ಪಾತ್ರರ ಸಾವಿನ ವೇಳೆಯಲ್ಲೂ ಸಾರ್ಥಕಥೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡುವ ಮೂಲಕ ಇನ್ನೊಬ್ಬರ ಬಾಳಿಗೆ ಬೆಳಕಾಗಿದ್ದಾರೆ.

ಗುರುವಾರ ಬೆಳಗ್ಗೆ ಶಿರಾದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಕಾರ್ಮಿಕರು ಸಾವು ಕಂಡಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಇವರ ನೇತ್ರದಾನ ಮಾಡಲಾಗಿದೆ. ಅಪಘಾತದಲ್ಲಿ ಮೃತರಾದ ಇಬ್ಬರು ಮಹಿಳೆಯರು ಒಂದು ಮಗು ಹಾಗೂ ಮೂವರು ಪುರುಷರು ಕಣ್ಣುಗಳನ್ನು ದಾನ ಮಾಡಲಾಗಿದೆ. ಕ್ರೂಸರ್‌ ಚಾಲಕನ ನಿರ್ಲಕ್ಷ್ಯದಿಂದಾಗಿ 9 ಮಂದಿ ಬಡ ಜೀವಗಳು ಬಲಿಯಾಗಿದ್ದವು.

Karnataka Accident News: ಭೀಕರ ಅಪಘಾತ; ರಾಯಚೂರು ಮೂಲದ 9 ಮಂದಿ ಸ್ಥಳದಲ್ಲೇ ದುರ್ಮರಣ!

ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಇದರ ನಡುವೆಯೂ ನೇತ್ರದಾನದ ನಿರ್ಧಾರವನ್ನು ಅವರ ಕುಟುಂಬಸ್ಥರು ತೆಗೆದುಕೊಂಡಿದ್ದಾರೆ. ಇದರ ನಡುವೆ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಅದರೊಂದಿಗೆ ಗಾಯಾಳುಗಳ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?