6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

6 ಮೃತ ಕಾರ್ಮಿಕರ ನೇತ್ರದಾನ ಮಾಡಿದ ಕುಟುಂಬಸ್ಥರು!

Published : Aug 25, 2022, 08:27 PM IST

ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ  ಸಾವನಪ್ಪಿದ ಕಾರ್ಮಿಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡಿದ್ದಾರೆ
 

ಬೆಂಗಳೂರು (ಆ. 25): ತುಮಕೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವು ಕಂಡ ಕಾರ್ಮಿಕರ ಕುಟುಂಬಸ್ಥರು, ಪ್ರೀತಿ ಪಾತ್ರರ ಸಾವಿನ ವೇಳೆಯಲ್ಲೂ ಸಾರ್ಥಕಥೆ ಮೆರೆದಿದ್ದಾರೆ. 6 ಮಂದಿಯ ಕುಟುಂಬಸ್ಥರು ನೇತ್ರದಾನ ಮಾಡುವ ಮೂಲಕ ಇನ್ನೊಬ್ಬರ ಬಾಳಿಗೆ ಬೆಳಕಾಗಿದ್ದಾರೆ.

ಗುರುವಾರ ಬೆಳಗ್ಗೆ ಶಿರಾದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಕಾರ್ಮಿಕರು ಸಾವು ಕಂಡಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಇವರ ನೇತ್ರದಾನ ಮಾಡಲಾಗಿದೆ. ಅಪಘಾತದಲ್ಲಿ ಮೃತರಾದ ಇಬ್ಬರು ಮಹಿಳೆಯರು ಒಂದು ಮಗು ಹಾಗೂ ಮೂವರು ಪುರುಷರು ಕಣ್ಣುಗಳನ್ನು ದಾನ ಮಾಡಲಾಗಿದೆ. ಕ್ರೂಸರ್‌ ಚಾಲಕನ ನಿರ್ಲಕ್ಷ್ಯದಿಂದಾಗಿ 9 ಮಂದಿ ಬಡ ಜೀವಗಳು ಬಲಿಯಾಗಿದ್ದವು.

Karnataka Accident News: ಭೀಕರ ಅಪಘಾತ; ರಾಯಚೂರು ಮೂಲದ 9 ಮಂದಿ ಸ್ಥಳದಲ್ಲೇ ದುರ್ಮರಣ!

ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಇದರ ನಡುವೆಯೂ ನೇತ್ರದಾನದ ನಿರ್ಧಾರವನ್ನು ಅವರ ಕುಟುಂಬಸ್ಥರು ತೆಗೆದುಕೊಂಡಿದ್ದಾರೆ. ಇದರ ನಡುವೆ ಅಪಘಾತದಲ್ಲಿ ಮೃತಪಟ್ಟವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಅದರೊಂದಿಗೆ ಗಾಯಾಳುಗಳ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!