ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡ ಮಾಯ

Oct 10, 2021, 2:11 PM IST

ಬೆಂಗಳೂರು (ಅ.10): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಕನ್ನಡ ಮಿಸ್ಸಿಂಗ್. ಆರೋಗ್ಯ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡ ಕಂಡಿಲ್ಲ. ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು. ಇಲ್ಲಿ ಕೋವಿಡ್ ಆಸ್ಪತ್ರೆ ಅಡಿಗಲ್ಲಿನಲ್ಲಿಯು ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದ್ದು ಎಲ್ಲಿಯೂ ಕನ್ನಡ  ಕಾಣಿಸಿಲ್ಲ. 

ಮೆಟ್ರೋ ಮಾರ್ಗ ಉದ್ಘಾಟನೆಯಲ್ಲಿ ಕನ್ನಡ ಕಡೆಗಣನೆ, ಕೊನೆಗೂ ಕ್ಷಮೆಯಾಚನೆ

ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲೇ ಕನ್ನಡವನ್ನು ಕಡೆಗಣಿಸಲಾಗಿದೆ.