ಕಾರ್ಗಿಲ್ ವಿಜಯ್ ದಿವಸ್ ಸಂಭ್ರಮಕ್ಕೆ 21 ವರ್ಷ; ಹುತಾತ್ಮ ಯೋಧರಿಗೆ ಸಿಎಂರಿಂದ ನಮನ

Jul 26, 2020, 4:05 PM IST

ಬೆಂಗಳೂರು (ಜು. 26): ಕಾರ್ಗಿಲ್ ವಿಜಯ್ ದಿವಸ್ ಸಂಭ್ರಮಕ್ಕೆ 21 ವರ್ಷ ತುಂಬಿದೆ. ಬೆಂಗಳೂರಿನ ಸೈನಿಕ್ ಸ್ಮಾರಕದಲ್ಲೂ ಹುತಾತ್ಮ ಯೋಧರನ್ನು ಸ್ಮರಿಸಲಾಯಿತು. ಮುಖ್ಯಮಮತ್ರಿ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಬೊಮ್ಮಾಯಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. 

ಈ ಕಾರ್ಗಿಲ್ ವಿಜಯ ದಿವಸದಂದು ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತದ ಏಕತೆ, ಸಾರ್ವಭೌಮತೆಗಳನ್ನು ಸಂಭ್ರಮಿಸುವ ಜೊತೆಗೆ ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗು ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಿಎಂ ಹೇಳಿದ್ದಾರೆ. 

ಹುತಾತ್ಮ ಯೋಧರ ಹೆಸರಲ್ಲಿ 800 ಗಿಡಗಳ 'ಕಾರ್ಗಿಲ್ ವನ'