ಸಿಎಂ ಖಾದಿಗೆ ಸೆಡ್ಡು ಹೊಡೆದ ಖಾಕಿ: ಎಎಸ್‌ಪಿ ಬರಮನಿ ರಾಜೀನಾಮೆ ರಹಸ್ಯ ರಿವೀಲ್

ಸಿಎಂ ಖಾದಿಗೆ ಸೆಡ್ಡು ಹೊಡೆದ ಖಾಕಿ: ಎಎಸ್‌ಪಿ ಬರಮನಿ ರಾಜೀನಾಮೆ ರಹಸ್ಯ ರಿವೀಲ್

Published : Jul 04, 2025, 04:32 PM IST
ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಿತರಾದ ಎಎಸ್ಪಿ ನಾರಾಯಣ ಬರಮನಿ ರಾಜೀನಾಮೆ ನೀಡಿದ್ದಾರೆ. ಈ ಘಟನೆ ಖಾಕಿ ಮತ್ತು ಖಾದಿ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ. ಸರ್ಕಾರದ ಮಧ್ಯಸ್ಥಿಕೆಯ ನಂತರ ಬರಮನಿ ರಾಜೀನಾಮೆ ಹಿಂಪಡೆಯುವ ಸಾಧ್ಯತೆ ಇದೆ.

ಬೆಂಗಳೂರು (ಜು. 4): ಸರ್ಕಾರದ ವೇದಿಕೆಯಲ್ಲೇ ಪೋಲೀಸ್ ಅಧಿಕಾರಿಗೆ ಅಪಮಾನವಾಗಿದ್ದು, ಖಾಕಿ-ಖಾದಿ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಹೊಡೆಯಲು ಕೈ ಎತ್ತಿದ್ದರಿಂದ ಭಾರೀ ಬೇಸರಗೊಂಡಿದ್ದು, ತಮ್ಮ ಆತ್ಮಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸದೆ, ರಾಜೀನಾಮೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಪಿ ನಾರಾಯಣ ಬರಮನಿ ಎಂಬವರು ಈ ಬೆಳವಣಿಗೆಯ ಕೇಂದ್ರಬಿಂದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಅಸಮರ್ಥ ವ್ಯಕ್ತಿಗತ ಟೀಕೆ ಎದುರಿಸಿದ್ದ ಈ ಅಧಿಕಾರಿ, ತಾನು ಅವಮಾನಿತನಾಗಿದ್ದಾಗಿ ಭಾವಿಸಿ ತನ್ನ ಹುದ್ದೆಯಿಂದ ಕೆಳಗೆ ಇಳಿಯಲು ನಿರ್ಧರಿಸಿದ್ದಾರೆ. ಅವರ ರಾಜೀನಾಮೆ ಪತ್ರದಲ್ಲಿರುವ ಅಂಶಗಳು ರಾಜ್ಯದ ಆಡಳಿತ ಯಂತ್ರದೊಳಗಿನ ಕಲಹವನ್ನು ಹೊರಹಾಕಿವೆ. ರಾಜಕೀಯ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗೆ ಕೊಂಚ ಗೌರವವಿಲ್ಲದ ರೀತಿಯಲ್ಲಿ ವರ್ತನೆಯಾಗಿದ್ದು, ಆತ್ಮಾಭಿಮಾನಕ್ಕೆ ಭಾರಿ ಧಕ್ಕೆ ತಂದಿದೆ. ಅಂದು ಸ್ಥಳದಲ್ಲೇ ಮುಖ್ಯಮಂತ್ರಿಗಳ ಧೋರಣೆಗೆ ನಾನು ತಕ್ಷಣವೇ ಪ್ರತಿಕ್ರಿಯಿಸಲು ಯೋಚನೆ ಮಾಡಿದ್ದೆ. ನೀವು ಮಾಡಿದ್ದು ತಪ್ಪು ಎಂದು ಹೇಳಬೇಕೆಂದಿದ್ದೆ. ಆದರೆ ನಾನು ಸುಮ್ಮನಾದೆ. ಕಾರಣ,ಸಿಎಂಗೆ ಸಾರ್ವಜನಿಕವಾಗಿ ಮುಜುಗರವಾಗಬಾರದು ಎಂದು ಎಂದು ನಾರಾಯಣ ಬರಮನಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬರಮನಿ ರಾಜೀನಾಮೆಗೆ ಸರ್ಕಾರದ ಮರು ಪ್ರತಿಕ್ರಿಯೆಯು ಕೂಡಾ ತಕ್ಷಣವೇ ಬಂದಿದೆ. ಇವರ ಮನವೊಲಿಸಲು ಹಲವರು ಯತ್ನಿಸಿದ್ದು, ಕೊನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಮಾತನಾಡಿದ್ದಾರೆ. ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಸೂಚನೆಯನ್ನೂ ನೀಡಿದ್ದಾರೆ. ಇನ್ನು ರೈತ ಸಂಘಟನೆಗಳು, ನಾಗರಿಕ ಹೋರಾಟಗಾರರು ಮತ್ತು ಕೆಲವರು ರಾಜಕೀಯವಾಗಿ ಈ ಘಟನೆಯನ್ನು ಖಂಡಿಸಿದ್ದಾರೆ. ಸರ್ಕಾರಿ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗೆ ಅಪಮಾನವಾಗುವುದು ಸರಿಯಲ್ಲ  ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more