ಒಂದೇ ವಾರದಲ್ಲಿ ಎರಡು ಬಂದ್.. ಇದು ಯಾರ ಪ್ರಮಾದ..? ಸ್ತಬ್ಧವಾಗುತ್ತಾ ಕರುನಾಡು..?

ಒಂದೇ ವಾರದಲ್ಲಿ ಎರಡು ಬಂದ್.. ಇದು ಯಾರ ಪ್ರಮಾದ..? ಸ್ತಬ್ಧವಾಗುತ್ತಾ ಕರುನಾಡು..?

Published : Sep 27, 2023, 02:27 PM IST

ಕಾವೇರಿಗಾಗಿ ಕೆರಳಿದೆ ಕರುನಾಡು.. ಧಗಧಗಿಸುತ್ತಿದೆ ಆಕ್ರೋಶದ ಕಿಚ್ಚು..!
ಕಾವೇರಿ ನಮ್ಮದು..ಹೋರಾಟವೂ ನಮ್ಮದು..ಆದರೂ ಯಾಕೆ ಈ ಪ್ರತಿಷ್ಠೆ..?
ಒಗ್ಗಟ್ಟು ಇರಬೇಕಾದ ಜಾಗದಲ್ಲಿ ಇದೆಂಥಾ ಇಕ್ಕಟ್ಟು..ಇದೆಂಥಾ ಬಿಕ್ಕಟ್ಟು..?

ಬೆಂಗಳೂರು ಬಂದ್ ಆಯ್ತು. ಶುಕ್ರವಾರ ಕರ್ನಾಟಕ ಬಂದ್(karnataka bandh). ಇಲ್ಲಿ ಕಾವೇರಿ ನೀರಿಗಾಗಿ ಹಾಹಾಕಾರ. ಅಲ್ಲಿ ಹೋರಾಟಗಾರರ ಮಧ್ಯೆ ಅಪಸ್ವರ. ದೆಹಲಿಯಲ್ಲಿ ರಾಜ್ಯಕ್ಕೆ ಮತ್ತೆ ಕಾವೇರಿ ಬರೆ. ಕಾವೇರಿ ನೀರಿಗಾಗಿ ಒಟ್ಟಾಗಿ ಧ್ವನಿ ಎತ್ತಬೇಕಾದವರ ಮಧ್ಯೆ ಬಿಕ್ಕಟ್ಟು ಏರ್ಪಟ್ಟಂತೆ ಕಾಣುತ್ತಿದೆ. ಇದು ಕಾವೇರಿ(Cauvery) ನೀರಿರಾಗಿ, ತಮಿಳುನಾಡಿಗೆ ಹರಿದು ಹೋಗುತ್ತಿರುವ ಕಾವೇರಿಯನ್ನು ಉಳಿಸಿಕೊಳ್ಳೋದಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮೊಳಗಿದ ಕಾವೇರಿ ಕಹಳೆ. “ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು” ಈ ಸಂಘಟನೆಯ ನೇತೃತ್ವದಲ್ಲಿ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಬೆಂಗಳೂರು ಬಂದ್ ನಡೀತು. ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾರಿಗೆ, ಶಿಕ್ಷಕರ ಸಂಘಟನೆಗಳು ಸೇರಿದಂತೆ 150ಕ್ಕೂ ಹೆಚ್ಚಿನ ಸಂಘಟನೆಗಳು ರಾಜಧಾನಿ ಬಂದ್'ಗೆ ಬೆಂಬಲ ಕೊಟ್ಟಿದ್ವು. ಆದ್ರೆ ಕನ್ನಡದ ಪರ, ಕರ್ನಾಟಕದ ಪರ, ನಾಡು ನುಡಿ, ನೆಲ ಜಲದ ವಿಚಾರದಲ್ಲಿ ಧ್ವನಿ ಎತ್ತುವ ಕನ್ನಡ ಹೋರಾಟಗಾರರು ಬೆಂಗಳೂರು ಬಂದ್"ನಿಂದ ದೂರ ಉಳಿದಿದ್ರು. ಆದರೆ ಕನ್ನಡಪರ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ.. ಹೀಗೆ ರಾಜ್ಯದ ಪ್ರಮುಖ ಸಂಘಟನೆಗಳು ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದ್ವೇ ಹೊರತು, ಬಂದ್‌ಗೆ ಬೆಂಬಲ ಕೊಡ್ಲಿಲ್ಲ. ಅದ್ರಲ್ಲೂ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದೆ. ಇದು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳ ಮಧ್ಯೆ ಇರೋ ಪ್ರತಿಷ್ಠೆಯ ಪರಿಣಾಮ. ಮಂಗಳವಾರ ನಡೆದ ಬೆಂಗಳೂರು ಬಂದ್'ಗೆ ಎಲ್ಲಾ ಸಂಘಟನೆಗಳು ಬೆಂಬಲ ಕೊಟ್ಟಿರ್ಲಿಲ್ಲ. ಸಂಘಟನೆಗಳ ನಡುವಿನ ತಿಕ್ಕಾಟದ ಕಾರಣ ಒಗ್ಗಟ್ಟಿರಬೇಕಾದ ಜಾಗದಲ್ಲಿ ಬಿಕ್ಕಟ್ಟು ಎದುರಾಯ್ತು. 

ಇದನ್ನೂ ವೀಕ್ಷಿಸಿ:  ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more